Webdunia - Bharat's app for daily news and videos

Install App

ಶಿರಾಡಿ, ಚಾರ್ಮಾಡಿ ಘಾಟಿ ಬಂದ್: ಬೆಂಗಳೂರಿನಿಂದ ಮಂಗಳೂರಿಗೆ ಹೋಗಲು ಮಾರ್ಗ ಇಲ್ಲಿದೆ

Krishnaveni K
ಶುಕ್ರವಾರ, 19 ಜುಲೈ 2024 (16:14 IST)
ಬೆಂಗಳೂರು: ಬೆಂಗಳೂರಿನಿಂದ ಕರಾವಳಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಎಲ್ಲಾ ಮೂರೂ ರಸ್ತೆಗಳು ಬಂದ್ ಆಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

ಶಿರಾಡಿ ಘಾಟ್, ಚಾರ್ಮಾಡಿ ಘಾಟಿ ಮತ್ತು ಸಂಪಾಜೆ ಮಾರ್ಗ ಬಂದ್ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಘಾಟಿ ರಸ್ತೆಗಳಲ್ಲಿ ಗುಡ್ಡ ಕುಸಿತದ ಭೀತಿಯಿದೆ. ಈ ಕಾರಣಕ್ಕೆ ಮೂರೂ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ಪ್ರಯಾಣಿಸಬೇಕಾದರೆ ಈ ಮೂರೂ ಘಾಟಿ ರಸ್ತೆಗಳ ಮೂಲಕವೇ ಹಾದು ಹೋಗಬೇಕು. ಆದರೆ ಈಗ ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತದ ಭೀತಿಯಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಸಂಚಾರ ರದ್ದು ಮಾಡಲಾಗಿದೆ. ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕುಂದಾಪುರ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕರಾವಳಿಯ ಭಾಗಗಳಿಗೆ ಈ ಮಾರ್ಗವಾಗಿಯೇ ತೆರಳಬೇಕಾಗುತ್ತದೆ.

ಚಾರ್ಮಾಡಿ ಘಾಟಿ ಮೂಲಕ ಲಘು ವಾಹನಗಳು, ಕೆಎಸ್ ಆರ್ ಟಿಸಿ ಬಸ್ ಗಳು ಹಗಲು ಹೊತ್ತು ಮಾತ್ರ ಸಂಚರಿಸಬಹುದಾಗಿದೆ. ರಾತ್ರಿ ಸಂಪೂರ್ಣವಾಗಿ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ರಸ್ತೆಯಲ್ಲೂ ಮರಗಳು ಬೀಳುವ ಅಪಾಯವಿದ್ದು, ಈ ಕಾರಣಕ್ಕೆ ಸಂಚಾರ ಸುರಕ್ಷಿತವಲ್ಲ. ಹೀಗಾಗಿ ಈಗ ಬೆಂಗಳೂರಿನಿಂದ ಕರಾವಳಿ ಭಾಗಕ್ಕೆ ಮತ್ತು ಕರಾವಳಿ ಭಾಗದಿಂದ ಬೆಂಗಳೂರಿಗೆ ಸಂಪೂರ್ಣ ಸಂಪರ್ಕವೇ ಕಡಿತಗೊಂಡಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments