Webdunia - Bharat's app for daily news and videos

Install App

ಶಿರಾಡಿ ಘಾಟಿಯಲ್ಲಿ ಮತ್ತೆ ಭಾರೀ ಭೂ ಕುಸಿತ: ವಾಹನಗಳು ಓಡಾಡುತ್ತಾ ಎನ್ನುವ ಅನನುಮಾನಕ್ಕೆ ಇಲ್ಲಿದೆ ಉತ್ತರ

Krishnaveni K
ಮಂಗಳವಾರ, 30 ಜುಲೈ 2024 (14:51 IST)
ಬೆಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟಿಯಲ್ಲಿ ಮತ್ತೆ ಭಾರೀ ಭೂ ಕುಸಿತವಾಗಿದ್ದು ಹಲವು ವಾಹನಗಳು ಮಣ್ಣಿನಡಿ ಸಿಲುಕಿದೆ.

ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂ ಕುಸಿತವಾಗಿದ್ದು, ಎರಡು ಕಾರು, ಟ್ಯಾಂಕ್ ಸೇರಿ ಆರು ವಾಹನಗಳು ಮಣ್ಣಿನಡಿ ಸಿಲುಕಿದೆ. ಕಾರಿನಲ್ಲಿದ್ದವರನ್ನು ರಕ್ಷಿಸುವ ಕೆಲಸ ಭರದಿಂದ ಸಾಗಿದೆ. ಶಿರಾಡಿ ಘಾಟಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಪದೇ ಪದೇ ಭೂಕುಸಿತವಾಗುತ್ತಿದೆ.

ಮೊನ್ನೆ ಸಂಜೆ ಶಿರಾಡಿ ಘಾಟಿಯಲ್ಲಿ ಭೂ ಕುಸಿತವಾಗಿದ್ದರಿಂದ ಕೆಲವು ಕಾಲ ಸಂಚಾರ ಸ್ಥಗಿತವಾಗಿತ್ತು. ಆದರೆ ನಿನ್ನೆ ರಾತ್ರಿ ವಾಹನ ಸಂಚಾರ ನಡೆದಿತ್ತು. ಆದರೆ ಇಂದು ಮತ್ತೆ ಭೂ ಕುಸಿತವಾಗಿದ್ದು, ಭಾರೀ ಅನಾಹುತ ನಡೆಯುವುದರಲ್ಲಿತ್ತು. ಅದೃಷ್ಟವಶಾತ್ ಎಲ್ಲರೂ ಬದುಕುಳಿದಿದ್ದಾರೆ.

ಇನ್ನೊಂದೆಡೆ ಉಪ್ಪಿನಂಗಡಿ ಬಳಿ ನೇತ್ರಾವತಿ ನದಿ ನೀರು ರಸ್ತೆ ಮೇಲೆಯೇ ಹರಿಯುತ್ತಿರುವುದರಿಂದ ಬೆಂಗಳೂರು-ಮಂಗಳೂರು ನಡುವಿನ ವಾಹನ ಸಂಚಾರ ಸ್ಥಗಿತವಾಗಿದೆ. ಇದೀಗ ಶಿರಾಡಿ ಘಾಟಿ ಮೂಲಕವೂ ರಸ್ತೆ ಸಂಪರ್ಕ ಕಡಿತಗೊಳಿಸಲಾಗಿದೆ. ಈಗಾಗಲೇ ಮಂಗಳೂರು-ಬೆಂಗಳೂರು ನಡುವಿನ ರೈಲ್ವೇ ಸಂಚಾರ ಸ್ಥಗಿತಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ಬೆಲೆ ಇಂದು ಇನ್ನೂ ಎತ್ತರ ಇನ್ನೂ ಹತ್ತಿರ

Jammu Kashmir cloud burst: ಮೇಘಸ್ಪೋಟಕ್ಕೆ ಹರಿದು ಬಂತು ಕಟ್ಟಡಗಳು, ವಾಹನಗಳು: ವಿಡಿಯೋ

DGP Om Prakash Rao ಹತ್ಯೆಯಾಗಿದ್ದು ಹೇಗೆ, ಪತ್ನಿ ಪಲ್ಲವಿ ಹೇಳಿದ್ದು ಕೇಳಿದರೆ ಬೆಚ್ಚಿ ಬೀಳ್ತೀರಿ

DK Shivakumar: ಡಿಕೆ ಶಿವಕುಮಾರ್ ಟೆಂಪಲ್ ರನ್ ಹಿಂದಿದೆ ಭಾರೀ ಲೆಕ್ಕಾಚಾರ: ಬಿಜೆಪಿಗೆ ಗಡ ಗಡ

Karnataka Weather: ರಾಜ್ಯದಲ್ಲಿ ಈ ವಾರ ಮಳೆಯಿರಲಿದೆಯೇ ಇಲ್ಲಿದೆ ಸಂಪೂರ್ಣ ಹವಾಮಾನ ವರದಿ

ಮುಂದಿನ ಸುದ್ದಿ
Show comments