Webdunia - Bharat's app for daily news and videos

Install App

ಕರಾವಳಿಯಲ್ಲಿ ಮಳೆ ಶುರುವಾಗುತ್ತಿದ್ದಂತೇ ಶಿರಾಡಿ ಘಾಟಿ ಗೋಳು ಶುರು

Krishnaveni K
ಶನಿವಾರ, 31 ಆಗಸ್ಟ್ 2024 (09:07 IST)
ಸಕಲೇಶಪುರ: ಇತ್ತ ಕರಾವಳಿಯಲ್ಲಿ ಮಳೆ ಜೋರಾಗುತ್ತಿದ್ದಂತೇ ಶಿರಾಡಿ ಘಾಟಿಯಲ್ಲಿ ಮತ್ತದೇ ಗೋಳು ಶುರುವಾಗಿದೆ. ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತದ ಭೀತಿಯಲ್ಲೇ ವಾಹನ ಸಂಚರಿಸುವಂತಾಗಿದೆ.

ಜುಲೈ, ಆಗಸ್ಟ್ ಮೊದಲ ವಾರದಲ್ಲಿ ಭಾರೀ ಮಳೆಯಿಂದಾಗಿ ಶಿರಾಡಿ ಘಾಟಿಯಲ್ಲಿ ರಸ್ತೆ ಮತ್ತು ರೈಲ್ವೇ ಮಾರ್ಗದಲ್ಲಿ ಪದೇ ಪದೇ ಗುಡ್ಡ ಕುಸಿತವಾಗಿ ಸಂಚಾರಕ್ಕೆ ಅಡ್ಡಿಯಾಗುತ್ತಲೇ ಇತ್ತು. ಬೆಂಗಳೂರಿನಿಂದ ಕರಾವಳಿ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ.

ಶಿರಾಡಿಯಲ್ಲಿ ರಸ್ತೆಯೇ ಕುಸಿದು ಕೆಲವು ದಿನ ಬಸ್ ಸಂಚಾರಕ್ಕೆ ಅಡ್ಡಿಯಾಗಿತ್ತು. ರೈಲ್ವೇ ಹಳಿ ಮೇಲೂ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಪದೇ ಪದೇ ರೈಲು ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಇದೀಗ ಮತ್ತೆ ಕರಾವಳಿ ಮತ್ತು ಶಿರಾಡಿ ಪರಿಸರದಲ್ಲಿ ಮಳೆ ಜೋರಾಗಿದ್ದು, ಮತ್ತೆ ಗುಡ್ಡ ಕುಸಿತದ ಭೀತಿ ಎದುರಾಗಿದೆ.

ರಸ್ತೆ ದುರಸ್ಥಿ, ಎತ್ತಿನ ಹೊಳೆ ಯೋಜನೆ ಸೇರಿದಂತೆ ಇತ್ತೀಚೆಗಿನ ದಿನಗಳಲ್ಲಿ ನಡೆದ ಸತತ ಕಾಮಗಾರಿಗಳಿಂದಾಗಿ ಶಿರಾಡಿ ರಸ್ತೆ ಈಗ ಅಪಾಯಕಾರಿಯಾಗಿ ಪರಿಣಮಿಸಿದೆ. ಪದೇ ಪದೇ ಗುಡ್ಡ ಕುಸಿತವಾಗುತ್ತಿದ್ದು, ಇಲ್ಲಿ ಸಂಚರಿಸುವಾಗ ಜೀವ ಕೈಯಲ್ಲಿ ಹಿಡಿದುಕೊಂಡೇ ಸಂಚರಿಸಬೇಕಾದ ಪರಿಸ್ಥಿತಿಯಿದೆ. ಸತತ ಮಳೆಯಿಂದಾಗಿ ಮಣ್ಣು ಸಡಿಲವಾಗಿದ್ದು, ಕೆಲವೊಂದು ಪ್ರದೇಶಗಳಲ್ಲಿ ಎಚ್ಚರಿಕೆಯಿಂದ ಸಂಚರಿಸಲು ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ಹೂತು ಹಾಕ್ತೇವೆ: ಪಾಕಿಸ್ತಾನ ಯಡವಟ್ಟು ಸಚಿವ ಖ್ವಾಜಾ ಆಸಿಫ್ ಹೇಳಿಕೆ

Karnataka Weather: ಶಕ್ತಿ ಸೈಕ್ಲೋನ್ ಇಫೆಕ್ಟ್, ಈ ದಿನದವರೆಗೂ ರಾಜ್ಯದಲ್ಲಿ ಮಳೆ ಸೂಚನೆ

ನನಗೇ ಅಧಿಕಾರ ಇದ್ದಿದ್ದರೆ ಮೆಟ್ರೋಗೆ ಬಸವಣ್ಣನ ಹೆಸರಿಡುತ್ತಿದ್ದೆ: ಸಿದ್ದರಾಮಯ್ಯ

ಬೆಂಗಳೂರಿನವರಿಗೆ ಕುರಿ, ಕೋಳಿ ಎಂದೆಲ್ಲಾ ಪ್ರಶ್ನೆ ಕೇಳಬೇಡಿ: ಡಿಕೆ ಶಿವಕುಮಾರ್ ಖಡಕ್ ಸೂಚನೆ

ಜಾತಿ ಗಣತಿಯಲ್ಲಿ ಗೊಂದಲವೇ ಹೆಚ್ಚಾಗಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments