Webdunia - Bharat's app for daily news and videos

Install App

ಶಿರಾಡಿಘಾಟ್ ರಸ್ತೆ ಲೋಕಾರ್ಪಣೆ

Webdunia
ಭಾನುವಾರ, 15 ಜುಲೈ 2018 (18:22 IST)
ರಾಜಧಾನಿ ಬೆಂಗಳೂರಿನಿಂದ ಹಾಸನ ಮಾರ್ಗವಾಗಿ ಕರಾವಳಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ಶಿರಾಡಿಘಾಟ್  ರಸ್ತೆಯನ್ನು ಲೋಕಾರ್ಪಣೆ ಮಾಡಲಾಯಿತು. ಸಕಲೇಶಪುರ ತಾಲೂಕು ಕೆಂಪುಹೊಳೆ ಜಂಕ್ಷನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವರಾದ ಹೆಚ್.ಡಿ.ರೇವಣ್ಣ, ವಸತಿ ಸಚಿವ ಯು.ಟಿ.ಖಾದರ್, ಸಂಸದ ನಳೀನ್ ಕುಮಾರ್ ಕಟೀಲ್
ಮೊದಲಾದವರು ಶಿರಾಡಿ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದರು.

ಶಿರಾಡಿಘಾಟ್ ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ. ಒಟ್ಟು 26 ಕಿಮೀ ಉದ್ದದ ಶಿರಾಡಿಘಾಟ್ ರಸ್ತೆಯ ಮೊದಲ ಹಂತದ 13 ಕಿಮೀ ಕಾಂಕ್ರೀಟ್ ಕಾಮಗಾರಿ ಮೂರು ವರ್ಷಗಳ ಹಿಂದೆ ಪೂರ್ಣಗೊಂಡಿತ್ತು. ಅದಾದ ಬಳಿಕ 2ನೇ ಹಂತದ 12.38 ಕಿಮೀ ಉದ್ದದ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಯನ್ನು  ಕಳೆದ ಜನವರಿ 20 ರಿಂದ ಕೈಗೆತ್ತಿಕೊಳ್ಳಲಾಗಿತ್ತು. ಆಗಿನಿಂದಲೂ ಈ ಮಾರ್ಗದ ಸಂಚಾರ ಬಂದ್ ಆಗಿ ಕರಾವಳಿ ಭಾಗಕ್ಕೆ ಹೋಗುವವರು ಸುತ್ತಿ ಬಳಸಿ ಪ್ರಯಾಣ ಮಾಡಬೇಕಿತ್ತು. ಕೊನೆಗೂ ಮಳೆಯ ಅಡೆ ತಡೆ ನಡುವೆಯೂ ಸುಮಾರು 74 ಕೋಟಿ ರೂ. ವೆಚ್ಚದ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಲೋಕಾರ್ಪಣೆ ಮಾಡಲಾಯಿತು.

ರಸ್ತೆ ಉದ್ಘಾಟನೆ ನಂತರ ಮಾತನಾಡಿದ ಸಚಿವ ಯು.ಟಿ.ಖಾದರ್, ಒಟ್ಟು 26 ಕಿಮೀ ಉದ್ದರ ಶಿರಾಡಿಘಾಟ್ ರಸ್ತೆ ಪೂರ್ಣವಾಗಿ ಜನ ಬಳಕೆಗೆ ಮುಕ್ತವಾಗಿರುವುದು ಖುಷಿ ತಂದಿದೆ ಎಂದರು. ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಬಾಕಿ ಉಳಿದಿರುವ ಸಣ್ಣಪುಟ್ಟ ಕಾಮಗಾರಿಗಳನ್ನು ಶೀಘ್ರವೇ ಮುಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಇದೇ ರೀತಿ ಹಾಸನದಿಂದ ಸಕಲೇಶಪುರ ಮತ್ತು ಗುಂಡ್ಯಾದಿಂದ ಮಂಗಳೂರಿನ ಬಿಸಿ ರೋಡ್ ವರೆಗೆ ನಾಲ್ಕು ಪಥದ ರಸ್ತೆ ಕಾಮಗಾರಿಯನ್ನೂ ತ್ವರಿತವಾಗಿ ಮುಗಿಸುವಂತೆ ಗುತ್ತಿಗೆದಾರರಿಗೆ ಆದೇಶ ಮಾಡಲಾಗಿದೆ ಎಂದು ವಸತಿ ಸಚಿವ ಯು.ಟಿ.ಖಾದರ್ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯುತ್ ಕಂಬಕ್ಕೆ ಸುತ್ತು ಹಾಕಿ ಹಕ್ಕಿಗಳನ್ನು ತಿನ್ನಲು ಹೋದ ಬೃಹತ್ ಹೆಬ್ಬಾವಿನ ಕತೆ ಏನಾಯ್ತು ನೋಡಿ Video

ಕಾಡಿನ ನಡುವೆ ರೈಲು ಪ್ರಯಾಣಿಸುವಾಗ ಡೋರ್ ತೆಗೆದು ಮಲಗಿದ್ದೇ ತಪ್ಪಾಯ್ತು: ಊಹಿಸಲೂ ಆಗದ ಘಟನೆಯ Video

ಎದುರು ಕಾಡಾನೆ ಎದುರಾದರೂ ಕಾರು ಮುನ್ನಗ್ಗಿಸಿದ ಮಹಿಳೆ: ಮುಂದೇನಾಯ್ತು ನೋಡಿ Video

ಒಂದೇ ಒಂದು ಮಾತಿನಿಂದ ಟಿಬಿ ಜಯಚಂದ್ರ ಮುನಿಸು ಮರೆಸಿದ ಸಿಎಂ ಡಿಕೆ ಶಿವಕುಮಾರ್

ಆಕಾಶದಲ್ಲಿ ವಿಮಾನ ಹಾರಾಡುತ್ತಿರುವಾಗಲೇ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ: ಮುಂದೇನಾಯ್ತು Video

ಮುಂದಿನ ಸುದ್ದಿ
Show comments