Webdunia - Bharat's app for daily news and videos

Install App

ಶಿರೂರಿನಲ್ಲಿ ಅರ್ಜುನ್ ಗಾಗಿ ಹುಡುಕಾಟ ಇನ್ನೂ ನಿಂತಿಲ್ಲ: ಲೇಟೆಸ್ಟ್ ಮಾಹಿತಿ

Krishnaveni K
ಶನಿವಾರ, 21 ಸೆಪ್ಟಂಬರ್ 2024 (10:45 IST)
ಶಿರೂರು: ಗುಡ್ಡ ಕುಸಿತದಿಂದ ಕಣ್ಮರೆಯಾಗಿದ್ದ ಕೇರಳ ಮೂಲದ ಟ್ರಕ್ ಡ್ರೈವರ್ ಅರ್ಜುನ್ ಗಾಗಿ ಹುಡುಕಾಟ ಇನ್ನೂ ನಿಂತಿಲ್ಲ. ಇಂದು ಮತ್ತೆ ಅರ್ಜುನ್ ಮೃತದೇಹಕ್ಕಾಗಿ ಹುಡುಕಾಟ ನಡೆಯಲಿದೆ.

ಜುಲೈ 16 ಕ್ಕೆ ಶಿರೂರಿನಲ್ಲಿ ಗುಡ್ಡ ಕುಸಿತವಾಗಿತ್ತು. ಇದರಲ್ಲಿ ಕೆಲವರು ಸಾವನ್ನಪ್ಪಿದ್ದು, ಈ ಪೈಕಿ ಕೆಲವು ಮೃತದೇಹಗಳಷ್ಠೇ ಪತ್ತೆಯಾಗಿತ್ತು. ಕೇರಳ ಮೂಲದ ಟ್ರಕ್ ಡ್ರೈವರ್ ಅರ್ಜುನ್ ಕೂಡಾ ತಮ್ಮ ಟ್ರಕ್ ಸಮೇತ ನಾಪತ್ತೆಯಾಗಿದ್ದರು. ಅವರ ಮೃತದೇಹ ಇನ್ನೂ ಸಿಕ್ಕಿಲ್ಲ. ಆದರೆ ಅವರ ಲಾರಿಯ ಕೆಲವು ಅವಶೇಷಗಳು ನದಿ ನೀರಿನಲ್ಲಿ ಪತ್ತೆಯಾಗಿತ್ತು.

ಹಾಗಿದ್ದರೂ ಅವರ ಹುಡುಕಾಟ ಇನ್ನೂ ನಿಂತಿಲ್ಲ. ಕನಿಷ್ಠ ಅರ್ಜುನ್ ಮೃತದೇಹದ ಭಾಗವಾದರೂ ಹುಡುಕಿಕೊಡಿ ಎಂದು ಅವರ ಕುಟುಂಬಸ್ಥರು ಬೇಡಿಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಮಳೆ ತೀವ್ರವಾಗಿದ್ದರಿಂದ ನದಿ ನೀರಿನಲ್ಲಿ ಹುಡುಕಾಟ ಕಷ್ಟವಾಗಿತ್ತು. ಆದರೆ ಈಗ ಮಳೆ ಕಡಿಮೆಯಾಗಿದ್ದು, ನೀರು ತಿಳಿಯಾಗಿದೆ.

ಹೀಗಾಗಿ ನದಿ ನೀರಿನಲ್ಲಿ ಇಂದಿನಿಂದ ಮತ್ತೆ ಅರ್ಜುನ್ ಮೃತದೇಹಕ್ಕಾಗಿ ಹುಡುಕಾಟ ಆರಂಭವಾಗಲಿದೆ.  ನಾವಿಕರು ಮತ್ತು ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದ ತಂಡ ಗಂಗಾವಳಿ ನದಿಯಲ್ಲಿ ಅರ್ಜುನ್ ಮೃತದೇಹಕ್ಕಾಗಿ ಹುಡುಕಾಟ ನಡೆಸಲಿದ್ದಾರೆ. ಈ ಬಾರಿ ಅವರ ಹುಡುಕಾಟಕ್ಕೆ ಫಲ ಸಿಗಲಿದೆ ಎಂಬ ವಿಶ್ವಾಸ ಕುಟುಂಬದವರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments