Webdunia - Bharat's app for daily news and videos

Install App

ಸೋದೆ ಮಠದ ಸುಪರ್ದಿಗೆ ಶೀರೂರು ಮಠ

Webdunia
ಗುರುವಾರ, 26 ಜುಲೈ 2018 (16:13 IST)
ಶೀರೂರು ಶ್ರೀಗಳ ನಿಗೂಢ ಸಾವಿನ ಪ್ರಕರಣ ನಂತರ ಶೀರೂರು ಮೂಲ ಮಠದ ಆಡಳಿತ  ಉಸ್ತುವಾರಿಗೆ  ಸೋದೆ ಮಠದ ವಿಶ್ವ ವಲ್ಲಭ ತೀರ್ಥರು ಮಠದ ಮಾಜಿ ಮ್ಯಾನೇಜರ್ ಸುಬ್ರಹ್ಮಣ್ಯ ಭಟ್ ಅವರನ್ನು ನೇಮಿಸಿದ್ದಾರೆ.

ಸದ್ಯ ಶಿರೂರು ಮಠದ ಒಳಗೆ  ಇತರರ  ಪ್ರವೇಶಕ್ಕೆ ನಿರ್ಬಂಧವನ್ನು ಹೇರಿರುವ ಪೋಲಿಸ್ ಇಲಾಖೆ ಮ್ಯಾನೇಜರ್ ಸುಬ್ರಹ್ಮಣ್ಯ ಭಟ್ ಹಾಗೂ ಇಬ್ಬರು ಅರ್ಚಕರಿಗೆ ಹಾಗೂ ಒಬ್ಬ ಕ್ಲೀನರ್ ಗೆ ಮಾತ್ರ ಮಠದ ಪ್ರವೇಶಕ್ಕೆ ಅನುಮತಿ ನೀಡಿದೆ.

ಮೂಲ ಮಠದಲ್ಲಿ ಸುಬ್ರಹ್ಮಣ್ಯ ಭಟ್ ಅವರ ಉಸ್ತುವಾರಿಯಲ್ಲಿ ವಿಠಲ ಹಾಗೂ ಇತರ ದೇವರುಗಳ ಪೂಜೆ ನಡೆಯುತ್ತಿದೆ
ಇನ್ನೂ ಶಿರೂರು ಮಠ 2500 ಏಕ್ರೆಗೂ  ಹೆಚ್ಚು  ಭೂಮಿ ಇದೆ. ಮಠದ ಅಸ್ತಿ ಅತೀಕ್ರಮಣ ಆಗುತ್ತೇ ಎಂಬ ಕಾರಣಕ್ಕಾಗಿ ಶಿರೂರು ಶ್ರೀಗಳ ಸಾವಿನ ಬಳಿಕ ಸಂಪ್ರದಾಯದಂತೆ ಶಿರೂರು ಮೂಲ ಮಠವನ್ನು ಸೋದೆ ಮಠ ತನ್ನ ಸುರ್ಪದಿಗೆ ತೆಗೆದುಕೊಂಡಿದೆ.
ಈಗ ಮಠದ ಆಸ್ತಿ ಪಾಸ್ತಿಗಳ ಮೇಲ್ವಿಚಾರಣೆಯನ್ನು ಸೋದೆ ಮಠ ನೋಡುತ್ತಿದ್ದು, ಇದರ ಉಸ್ತುವಾರಿಯ ಕೆಲಸವನ್ನು ಸುಬ್ರಹ್ಮಣ್ಯ ಭಟ್ ಅವರಿಗೆ ವಹಿಸಲಾಗಿದೆ. ಮಠದ ಒಳಗೆ ಪ್ರವೇಶಿಸುವಾಗ ಸುಬ್ರಹ್ಮಣ್ಯ ಭಟ್ , ಅರ್ಚಕರು ಮತ್ತು ಒಬ್ಬ ಕ್ಲೀನರ್ ಪೋಲಿಸ್ ಇಲಾಖೆಯ ದಾಖಲೆಗಳಿಗೆ ಸಹಿ ಹಾಕಿಯೇ ಒಳ ಪ್ರವೇಶಿಸಬೇಕಾಗುತ್ತದೆ. ಇನ್ನೂ ಶಿರೂರು ಮೂಲ ಮಠದಲ್ಲಿ ವೈದ್ಯರ ತಂಡವೊಂದು ಬೀಡು ಬಿಟ್ಟಿರುವ ವಿಚಾರ ತಿಳಿದು ಬಂದಿದೆ. ತಂಡದಲ್ಲಿ ಸುಮಾರು 10 ಕ್ಕೂ ಹೆಚ್ಚು ವೈದ್ಯರು ಮಠದ ಸುತ್ತಾ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments