Publish Date: Sun, 22 Jul 2018 (12:23 IST)
Updated Date: Sun, 22 Jul 2018 (12:25 IST)
ಉಡುಪಿ: ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಅನುಮಾನಾಸ್ಪದ ಸಾವಿನ ತನಿಖೆ ನಡೆಯುತ್ತಿರುವ ಬೆನ್ನಲ್ಲೇ ಮಠದ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆಗಳು ಮೂಡಿವೆ.
ಸದ್ಯಕ್ಕೆ ಆಷಾಢ ಮಾಸ ನಡೆಯುತ್ತಿರುವುದರಿಂದ ಇದು ಮುಗಿದ ಬಳಿಕವೇ ಉತ್ತರಾಧಿಕಾರಿ ನೇಮಕವಾಗಲಿದೆ ಎನ್ನಲಾಗಿದೆ. ಸದ್ಯಕ್ಕೆ ಶೀರೂರು ಮಠದ ಜವಾಬ್ಧಾರಿಯನ್ನು ಸೋದೆ ಮಠಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಇದೀಗ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಸಾವಿನ ಬಗ್ಗೆ ಎದ್ದಿರುವ ಅನುಮಾನಗಳಿಗೆ ಉತ್ತರ ಕಂಡುಕೊಳ್ಳಲು ಪೊಲೀಸರು ತನಿಖೆ ಮುಂದುವರಿಸಿದ್ದು, ರಮ್ಯಾ ಶೆಟ್ಟಿ ಎನ್ನುವ ಬ್ರಹ್ಮಾವರ ಮೂಲದ ಮಹಿಳೆಯನ್ನು ವಿಚಾರಣೆಗೊಳಪಡಿಸಿದ್ದಾರೆ. ಈಕೆ ಸ್ವಾಮೀಜಿಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದಳು ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.