ಶೀರೂರು ಶ್ರೀಗಳ 3 ಕೆಜಿ ಚಿನ್ನಾಭರಣ ನಾಪತ್ತೆ?

Webdunia
ಬುಧವಾರ, 25 ಜುಲೈ 2018 (17:37 IST)
ಸುಮಾರು 3 ಕೆಜಿಯಷ್ಟು ಚಿನ್ನಾಭರಣವನ್ನು ಶೀರೂರು ಶ್ರೀಗಳು ಹೊಂದಿದ್ದರು. ಆದರೆ ಅವರ ನಿಧನದ ಬಳಿಕ ಅವುಗಳೆಲ್ಲವೂ ನಿಗೂಢವಾಗಿ ನಾಪತ್ತೆಯಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳು ಯಾರ ಕೈಯಲ್ಲಿದೆ ಅನ್ನೋ ಪ್ರಶ್ನೆಯೂ ಎದುರಾಗಿದೆ. ಇದ್ರ ಹಿಂದೆ ರಮ್ಯಾ ಶೆಟ್ಟಿ ಕೈವಾಡದೆಯೇ ಅನ್ನೋ ಬಗ್ಗೆ ಕುತೂಹಲ ಮೂಡಿದೆ.

ಶೀರೂರು ಶ್ರೀಗಳ ನಿಗೂಢ ಸಾವಾಗಿ ವಾರ ಕಳೆದರೂ ಯಾರೊಬ್ಬರ ಬಂಧನವಾಗಿಲ್ಲ. ಶೀರೂರು ಶ್ರೀಗಳ ಅನುಮಾನಸ್ಪದ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಹಲವು ಸುಳಿವುಗಳು ಸಿಕ್ಕಿದೆ. ಕಳೆದುಹೋದ ಸಿಸಿಟಿವಿ ಡಿವಿಆರ್ ಇಂದು ನದಿಯಲ್ಲಿ ಪತ್ತೆಯಾಗಿತ್ತು. ಸ್ವಾಮೀಜಿಗೆ ಸೇರಿದ ಒಂದು ಕೋಟಿ ಮೌಲ್ಯದ ಚಿನ್ನಾಭರಣ ಕಳೆದುಹೋಗಿದೆ ಎಂದು ತಿಳಿದುಬಂದಿದೆ. ಸುಮಾರು 3 ಕೆಜಿಯಷ್ಟು ಚಿನ್ನಾಭರಣವನ್ನು ಶ್ರೀಗಳು ಹೊಂದಿದ್ದರು. ಆದರೆ ಅವರ ನಿಧನದ ಬಳಿಕ ಅವುಗಳೆಲ್ಲವೂ ನಿಗೂಢವಾಗಿ ನಾಪತ್ತೆಯಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳು ಯಾರ ಕೈಯಲ್ಲಿದೆ ಅನ್ನೋ ಪ್ರಶ್ನೆಯೂ ಎದುರಾಗಿದೆ. ಇದ್ರ ಹಿಂದೆ ರಮ್ಯಾ ಶೆಟ್ಟಿ ಕೈವಾಡದೆಯೇ ಅನ್ನೋ ಬಗ್ಗೆ ಕುತೂಹಲ ಮೂಡಿದೆ.

ಪೊಲೀಸರು ರಮ್ಯಾ ಶೆಟ್ಟಿ ಹಾಗೂ ಅವರ ಸ್ನೇಹಿತನನ್ನು ನಿನ್ನೆ ವಿಚಾರಣೆಗೊಳಪಡಿಸಿದ್ದಾರೆ. ಸದ್ಯ ಪೊಲೀಸ್ ವಶದಲ್ಲಿರುವ ರಮ್ಯಾ ಶೆಟ್ಟಿ ಗೆಳೆಯ ಇಕ್ಬಾಲ್ ಶೇಖ್ ಮನ್ಸೂರ್ ಮೂಲತಃ ಉಡುಪಿಯ ಕಾಪು ನಿವಾಸಿಯಾಗಿದ್ದು, ಮುಂಬೈ ಸಂಪರ್ಕದಿಂದಾಗಿ ರಮ್ಯಾ ಶೆಟ್ಟಿ ಪರಿಚಯವಾಗಿತ್ತು.

ಶಿರೂರು ಮೂಲಮಠದಲ್ಲಿ ನಾಪತ್ತೆಯಾಗಿದ್ದ ಸಿಸಿಟಿವಿ ಡಿವಿಆರ್ ನಾಪತ್ತೆ ಹಿಂದೆಯೂ ಈತನ ಕೈವಾಡವಿರುವ ಬಗ್ಗೆ ತನಿಖೆ ನಡೆಸಲಾಗಿದೆ. ವಿಚಾರಣೆ ವೇಳೆ ಈತ ಸಿಸಿಟಿವಿ ಡಿವಿಆರ್ ಕದ್ದೊಯ್ದು ನದಿಗೆ ಎಸೆದಿರುವ ಬಗ್ಗೆ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ. ಇದ್ರ ಜಾಡು ಹಿಡಿದ ಪೊಲೀಸರು ನದಿಯಲ್ಲೆಲ್ಲಾ ಹುಡುಕಾಡಿ, ಇಂದು ಮುಂಜಾನೆ ವೇಳೆ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments