Webdunia - Bharat's app for daily news and videos

Install App

ಶಿರೂರು: ಕೇರಳ ಲಾರಿ ಡ್ರೈವರ್ ಅರ್ಜುನ್ ದೇಹ ಕೊನೆಗೂ ಪತ್ತೆ: ಖಚಿತಪಡಿಸಿಕೊಳ್ಳಲು ಹೀಗೆ ಮಾಡಲಿದ್ದಾರೆ ಪೊಲೀಸರು

Krishnaveni K
ಬುಧವಾರ, 7 ಆಗಸ್ಟ್ 2024 (10:18 IST)
Photo Credit: X
ಶಿರೂರು: ಇತ್ತೀಚೆಗೆ ಶಿರೂರಿನಲ್ಲಿ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳ ಲಾರಿ ಡ್ರೈವರ್ ಅರ್ಜುನ್ ಮೃತದೇಹ ಕೊನೆಗೂ ಪತ್ತೆಯಾಗಿದೆ ಎನ್ನಲಾಗಿದೆ. ಆದರೆ ಇದನ್ನು ಖಚಿತಪಡಿಸಲು ಪೊಲೀಸರು ಪರೀಕ್ಷೆ ನಡೆಸಲಿದ್ದಾರೆ.

ಶಿರೂರು ಗುಡ್ಡ ಕುಸಿತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. ಈ ಪೈಕಿ 8 ಮಂದಿಯ ಮೃತದೇಹ ಪತ್ತೆಯಾಗಿತ್ತು. ಕೇರಳ ಲಾರಿ ಡ್ರೈವರ್ ಅರ್ಜುನ್ ಸೇರಿದಂತೆ 3 ಮಂದಿ ಮೃತದೇಹ ಪತ್ತೆಗಾಗಿ ಸಾಕಷ್ಟು ಶೋಧ ಕಾರ್ಯ ನಡೆಸಲಾಗಿತ್ತು. ಅರ್ಜುನ್ ಲಾರಿಯ ಅವಶೇಷಗಳು ನದಿಯಲ್ಲಿ ಪತ್ತೆಯಾಗಿತ್ತು. ಆದರೆ ಅರ್ಜುನ್ ಮೃತದೇಹ ಪತ್ತೆಯಾಗಿರಲಿಲ್ಲ.

ಭಾರತೀಯ ಸೇನೆಯನ್ನೇ ರಕ್ಷಣಾ ಕಾರ್ಯಕ್ಕೆ ನಿಯೋಜಿಸಲಾಗಿತ್ತು. ಕೇರಳ ಸರ್ಕಾರದಿಂದ ಅರ್ಜುನ್ ಮೃತದೇಹ ಪತ್ತೆಗಾಗಿ ಒತ್ತಡವಿತ್ತು. ಆದರೆ ಏನೇ ಆದರೂ ಗಂಗಾವಳಿ ನದಿಯ ಹರಿವಿನ ತೀವ್ರತೆ ಹೆಚ್ಚಾಗಿದ್ದರಿಂದ ಮೃತದೇಹ ಪತ್ತೆಯಾಗಿರಲೇ ಇಲ್ಲ. ಇದೀಗ ಘಟನೆ ನಡೆದು 19 ದಿನಗಳು ಕಳೆದಿದ್ದು ಈಗ ಹೊನ್ನಾವರ ಸಮುದ್ರ ದಂಡೆಯಲ್ಲಿ ಅಪರಿಚಿತ ಮೃತದೇಹವೊಂದು ಕೊಳತ ಸ್ಥಿತಿಯಲ್ಲಿ ಪತ್ತೆಯಾಗಿದೆ.

 ಈ ಮೃತದೇಹ ಅರ್ಜುನ್ ನದ್ದಾಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ಖಚಿತವಾಗಿ ಯಾರದ್ದು ಎಂದು ಗುರುತಿಸುವ ಸ್ಥಿತಿಯಲ್ಲಿಲಲ್ಲ. ಹೀಗಾಗಿ ಪೊಲೀಸರು ಶವವನ್ನು ದಡಕ್ಕೆ ತಂದು ಡಿಎನ್ ಎ ಪರೀಕ್ಷೆಗೆ ಕಳುಹಿಸಿದ್ದಾರೆ. ಅರ್ಜುನ್ ನದ್ದೇ ಮೃತದೇಹವೆ ಎಂದು ಖಚಿತಪಡಿಸಲು ಆತನ ಸಹೋದರ ಅಭಿಜಿತ್ ನ ಸ್ಯಾಂಪಲ್ ಗಳನ್ನು ಮ್ಯಾಚ್ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments