Webdunia - Bharat's app for daily news and videos

Install App

ಶಿರೂರು ಭೂಕುಸಿತ: ನಾಪತ್ತೆಯಾದವರ ಪತ್ತೆ ಕಾರ್ಯ ಮುಂದುವರೆಸುವಂತೆ ರಾಜ್ಯಕ್ಕೆ ಕೇರಳ ಸಚಿವ ಮನವಿ

Sampriya
ಸೋಮವಾರ, 29 ಜುಲೈ 2024 (12:00 IST)
Photo Courtesy X
ಕಾರವಾರ: ಉತ್ತರ ಕನ್ನಡದ ಶಿರೂರಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ನಾಪತ್ತೆಯಾಗಿರುವ ಕೇರಳದ ಲಾರಿ ಚಾಲಕ ಅರ್ಜುನ ಅವರ ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ನಿನ್ನೆ ಈಜು ತಜ್ಞ ಈಶ್ವರ್ ಮಲ್ಪೆ ಅವರ ತಂಡ ನಡೆಸಿದ ಶೋಧ ಕಾರ್ಯಚರಣೆ ವಿಫಲವಾಗಿತ್ತು. ಈ ಸಂಬಂಧ ಪ್ರತಿಕ್ರಿಯಿಸಿದ ಈಶ್ವರ ಮಲ್ಪೆ ಅವರು ಮೊದಲ ಬಾರಿ ನಮ್ಮ ಪ್ರಯತ್ನ ವಿಫಲವಾಗಿದೆ. ಲಾರಿ ಸುಮಾರು 50 ಅಡಿ ಅಳದಲ್ಲಿರುವ ಸಾಧ್ಯತೆಯಿದ್ದು, ನೀರಿನ ರಭಸ ಜಾಸ್ತಿಯಾಗಿದೆ. ಅದರ ಜತೆಗೆ ನೀರು ಕಲುಷಿತಗೊಂಡಿರುವುದರಿಂದ ನೀರಿನ ಒಳಗೆ ಏನೂ ಕಾಣುತ್ತಿಲ್ಲ. ನೀರು ತಿಳಿ ಆದ್ಮೇಲೆ ಅಷ್ಟೇ ಶೋಧ ಕಾರ್ಯ ನಡೆಸಬಹುದು ಎಂದು ಹೇಳಿದ್ದಾರೆ.

ಈ ಮೂಲಕ ಸರ್ಕಾರ ತಾತ್ಕಲಿಕವಾಗಿ ಇದೀಗ ಶೋಧ ಕಾರ್ಯವನ್ನು ಸ್ಥಗಿತ ಮಾಡಿದ್ದು, ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಕೇರಳ ಪ್ರವಾಸೋದ್ಯಮ ಸಚಿವ ಪಿ ಎ ಮೊಹಮ್ಮದ್ ರಿಯಾಸ್ ನಿರಾಶೆ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರ್ಕಾರ ತನ್ನ ನಿಲುವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ ರಿಯಾಸ್, ನೌಕಾ ನೆಲೆಯಿಂದ ಅತ್ಯುತ್ತಮ ಮುಳುಗು ತಜ್ಞರನ್ನು ನಿಯೋಜಿಸುವ ಅಗತ್ಯವನ್ನು ಒತ್ತಿ ಹೇಳಿದರು. ಲಭ್ಯವಿರುವ ಎಲ್ಲ ಸಂಪನ್ಮೂಲಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಬೇಕು. ಇನ್ನೂ ಹಲವು ಸಾಧ್ಯತೆಗಳಿವೆ. ಎಲ್ಲರೂ ಚರ್ಚಿಸಿದ ನಿರ್ಣಯವನ್ನು ಜಾರಿಗೊಳಿಸಬೇಕು ಎಂದು ಅವರು ಆಗ್ರಹ ಮಾಡಿದ್ದಾರೆ.

ನಮ್ಮ ಜತೆ ಚರ್ಚಿಸದೆ ಈ ಶೋಧ ಕಾರ್ಯ ಸ್ಥಗಿತ ಮಾಡಿರುವುದು ಸರಿಯಲ್ಲ. ಬೇರೆ ರಾಜ್ಯವಾದ್ದರಿಂದ ನಮ್ಮ ಮಂತ್ರಿಗಳು ಅಲ್ಲಿ ಬೀಡು ಬಿಡುವಂತಿಲ್ಲ, ಆದರೆ ನಾವು ಅಲ್ಲಿಗೆ ಹೋಗಿದ್ದೆವು. ಒಬ್ಬ ನಾಗರಿಕನಾಗಿ ಪ್ರತಿಕ್ರಿಯಿಸುತ್ತಿದ್ದೇನೆ, ಸಚಿವನಾಗಿ ಅಲ್ಲ ಎಂದು ಅವರು ಹೇಳಿದರು.

ಅರ್ಜುನ್ ಅವರ ತಾಯಿ ಶೀಲಾ ಅವರು ರಕ್ಷಣಾ ಕಾರ್ಯವನ್ನು ಮುಂದುವರೆಸುವಂತೆ ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಒಡಿಶಾದ ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: 600 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಆದಾಯ ತೆರಿಗೆ ಸಲ್ಲಿಕೆ ಮಾಡುವ ಮೊದಲು ಈ ಹೊಸ ನಿಯಮ ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments