Webdunia - Bharat's app for daily news and videos

Install App

ಶಿರೂರು ಗುಡ್ಡ ಕುಸಿತ ದುರಂತಕ್ಕೆ ನಿಜ ಕಾರಣ ಬಯಲು

Krishnaveni K
ಶನಿವಾರ, 27 ಜುಲೈ 2024 (13:09 IST)
ಅಂಕೋಲಾ: ಶಿರೂರಿನಲ್ಲಿ ಗುಡ್ಡ ಕುಸಿತ ದುರಂತಕ್ಕೆ ನಿಜವಾದ ಕಾರಣವೇನು ಎಂಬುದನ್ನು ಭಾರತೀಯ ಭೂವೈಜ್ಞಾನಿಕ ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಹೆದ್ದಾರಿ ಪ್ರಾಧಿಕಾರದ ವಾದವನ್ನು ಸಂಪೂರ್ಣವಾಗಿ ಅಲ್ಲಗಳೆದಿದೆ.

ಶಿರೂರಿನಲ್ಲಿ ಗುಡ್ಡ ಕುಸಿತವಾದ ಕಾರಣ ಹಲವರು ಸಾವನ್ನಪ್ಪಿದ್ದಲ್ಲದೆ, ಜನವಸತಿ ಪ್ರದೇಶ ನಿರ್ನಾಮವಾಗಿತ್ತು. ಈಗಲೂ ಕೇರಳದ ಲಾರಿ ಡ್ರೈವರ್ ಅರ್ಜುನ್ ಮೃತದೇಹಕ್ಕಾಗಿ ಹುಡುಕಾಟ ನಡೆಯುತ್ತಿದೆ. ಈ ಪ್ರಕರಣ ದೇಶದಾದ್ಯಂತ ಸುದ್ದಿಯಾಗಿತ್ತು. ಸಂಸತ್ ನಲ್ಲೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಘಟನೆ ಬಗ್ಗೆ ಮಾತನಾಡಿದ್ದರು.

ಈ ಘಟನೆಗೆ ಪ್ರಾಕೃತಿಕ ವಿಕೋಪ ಕಾರಣವೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೇಳುತ್ತಿತ್ತು. ಆದರೆ ಇದೀಗ ಭೂವೈಜ್ಞಾನಿಕ ಸಮೀಕ್ಷೆ ಪ್ರಕಾರ ಪ್ರಾಕೃತಿಕ ವಿಕೋಪ ಇದಕ್ಕೆ ಕಾರಣವಲ್ಲ. ಬದಲಾಗಿ ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಘಟನೆಗೆ ಕಾರಣ ಎಂದು ಸರ್ಕಾರಕ್ಕೆ ವರದಿ ನೀಡಿದೆ.

ಅವೈಜ್ಞಾನಿಕ ರಸ್ತೆ ನಿರ್ಮಾಣದಿಂದಾಗಿ ಪ್ರಾಕೃತಿಕವಾಗಿರುವ ಒಳಚರಂಡಿ ನೀರಿನ ವ್ಯವಸ್ಥೆಗೆ ತೊಂದರೆಯಾಗಿದೆ. ಇದರಿಂದಾಗಿ ಇಳಿಜಾರು ಪ್ರದೇಶಗಳಲ್ಲಿ ಮಾನವ ಹಸ್ತಕ್ಷೇಪದಿಂದ ತೊಂದರೆ ಉಂಟಾಗಿ ಘಟನೆ ಸಂಭವಿಸಿದೆ ಎಂದು ವರದಿ ನೀಡಿದೆ. ಜೊತೆಗೆ ಈ ಸಂದರ್ಭದಲ್ಲಿ ಭಾರೀ ಮಳೆಯಾಗಿರುವುದು ಘಟನೆ ನಡೆಯಲು ಕಾರಣವಾಯಿತು ಎಂದಿದೆ. ಈ ವರದಿಯಿಂದ ಈಗ ಅವೈಜ್ಞಾನಿಕವಾಗಿ ನಿರ್ಮಾಣವಾಗುವ ರಸ್ತೆ ಕಾಮಗಾರಿಗಳ ಬಗ್ಗೆ ಗಂಭೀರವಾಗಿ ಚಿಂತಿಸಬೇಕಾದ ಅನಿವಾರ್ಯತೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments