Webdunia - Bharat's app for daily news and videos

Install App

ಹರಿಹರ ತಾಲೂಕಿನ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ , ಖರ್ಗೆ ರಾಜಕೀಯ ಭವಿಷ್ಯ

Webdunia
ಶನಿವಾರ, 1 ಅಕ್ಟೋಬರ್ 2022 (15:45 IST)
ಕಾಂಗ್ರೆಸ್​ನ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆ ಸಮೀಪಿಸುತ್ತಿದ್ದು, ಸಂಸದ ಶಶಿ ತರೂರ್ ಮತ್ತು ಮಾಜಿ ಸಚಿವ ಕೆ.ಎನ್​.ತ್ರಿಪಾಠಿ, ಗಾಂಧಿ ಪರಿವಾರದ ನಿಷ್ಠ ಮತ್ತು ಪಕ್ಷದ ಶಿಸ್ತಿನ ಸಿಪಾಯಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಿದ್ದಾರೆ.
ಮೂವರು ನಾಯಕರು ನಾಮಪತ್ರ ಸಲ್ಲಿಸಿದ್ದು, ಮುಂದಿನ ಕಾಂಗ್ರೆಸ್​ ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಕುತೂಹಲ ಗರಿಗೆದರಿರುವಾಗಲೇ ಖರ್ಗೆ ಕುರಿತಾದ ಅಚ್ಚರಿಯ ಭವಿಷ್ಯವೊಂದು ಹೊರಬಿದ್ದಿದೆ.
 
ಇತ್ತೀಚಿನ ದಿನಗಳಲ್ಲಿ ರಾಜಕೀಯ ಭವಿಷ್ಯದ ಕುರಿತು ಭಾರೀ ಸುದ್ದಿಯಲ್ಲಿರುವ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ಇದೀಗ ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಭವಿಷ್ಯ ನುಡಿದಿದ್ದಾರೆ. ಖರ್ಗೆ ಅವರು ಕಾಂಗ್ರೆಸ್​ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುತ್ತಾರೆ ಎಂದು ಫೇಸ್​ಬುಕ್​ ಪೇಜ್​ನಲ್ಲಿ ಭವಿಷ್ಯವಾಣಿಯನ್ನು ಸ್ವಾಮೀಜಿ ಪೋಸ್ಟ್​ ಮಾಡಿದ್ದಾರೆ.
ಖರ್ಗೆ ಅವರಿಗೆ ಸದ್ಯದ ದಶಾಭುಕ್ತಿಯಲ್ಲಿ ಅತ್ಯಂತ ಅನುಕೂಲಕರ ಸ್ಥಿತಿಗತಿಗಳು ನಡೆಯುತ್ತಿರುವುದರಿಂದ ಖರ್ಗೆ ಅವರಿಗೆ ಅಧಿಕಾರಿ ಪ್ರಾಪ್ತಿಯಾಗಲಿದೆ. ಆದ್ದರಿಂದ ಅವರಿಗೆ ಆಶೀರ್ವಾದ ಮಾಡುತ್ತಾ ದೀನ-ದಲಿತರಿಗೆ, ಬಡವರಿಗೆ, ನಿರುದ್ಯೋಗಿಗಳನ್ನು ಗುರುತಿಸಿ ಅವರಿಗೆ ಸಹಾಯವನ್ನು ಮಾಡಿ. ಮೇಲಾಗಿ ನಮ್ಮ ದೇಶ ನಿಂತಿರುವುದು ಕೃಷಿಯ ಮೇಲೆ ಆದ್ದರಿಂದ ರೈತರನ್ನು ಗಮನಿಸಿ, ಆದಷ್ಟು ರೈತರಿಗೆ ಆರ್ಥಿಕತೆಯ ಸಹಾಯ ಮಾಡಿ. ರೈತರ ಕುಟುಂಬದ ಶಿಕ್ಷಿತರಿಗೆ ನೆರವಾಗಿ, ಇದರಿಂದ ನಿಮಗೆ ಶ್ರೀ ಭಗವತಿ ಚಂಡಿಕಾ ಪರಮೇಶ್ವರಿಯು ಅನುಗ್ರಹ ಮಾಡುತ್ತಾಳೆ. ಇದು ನಿಮಗೆ ನೆನಪಿರಲಿ. ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶುಭ ಆಶೀರ್ವಾದಗಳನ್ನು ನೀಡುತ್ತಾ, ಎಲ್ಲರೂ ಒಳ್ಳೆಯದನ್ನೇ ಯೋಚಿಸಿ, ಒಳ್ಳೆಯದನ್ನೇ ಮಾಡಿ, ನಿಮಗೂ ಒಳ್ಳೆಯದೇ ಆಗುತ್ತದೆ. ಎನಗಿಂತ ಕಿರಿಯರಿಲ್ಲ, ಸದ್​ ಭಕ್ತರಿಗಿಂತ ಹಿರಿಯರಿಲ್ಲ ಎಂದು ಭವಿಷ್ಯವಾಣಿಯನ್ನು ಸ್ವಾಮೀಜಿ ನುಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಮುಂದಿನ ಸುದ್ದಿ
Show comments