Select Your Language

Notifications

webdunia
webdunia
webdunia
webdunia

ಫ್ಲೆಕ್ಸ್ ವಿವಾದದಿಂದ ಮಂಕಾದ ಶಿವಮೊಗ್ಗ

ಫ್ಲೆಕ್ಸ್ ವಿವಾದದಿಂದ ಮಂಕಾದ ಶಿವಮೊಗ್ಗ
Shivamogga , ಮಂಗಳವಾರ, 16 ಆಗಸ್ಟ್ 2022 (14:50 IST)
ಸೋಮವಾರ ನಡೆದ ಫ್ಲೆಕ್ಸ್ ವಿವಾದದ ನಂತರ ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಕಳೆ ಇಲ್ಲದಂತಾಗಿದೆ.ಪೊಲೀಸರು ಅಂಗಡಿ-ಮುಂಗಟ್ಟು ಬಂದ್ ಮಾಡಿಸಿದ ಪರಿಣಾಮ ನಗರದ ಹೃದಯ ಭಾಗ ನೆಹರೂ ವೃತ್ತ, ಗೋಪಿ ಸರ್ಕಲ್ ಬಿಕೊ ಅನ್ನುತ್ತಿದ್ದವು.
 
ಜಿಲ್ಲಾಡಳಿತ 144ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ವಿಧಿಸಿತು. ಮಂಗಳವಾರ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಯಿತು.ನಿಷೇಧಾಜ್ಞೆಯಿಂದ ಸಂಜೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ರದ್ದುಗೊಳಿಸಲಾಗಿದೆ.
 
ಇನ್ನೂ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಪೂರ್ವ ವಲಯದ ಐಜಿಪಿ ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಅವರೊಂದಿಗೆ ಚರ್ಚಿಸಿ ಮಾಹಿತಿ ಪಡೆದರು.ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳುವಂತೆ ಸೂಚಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಪುಟ ಸಭೆಯಲ್ಲಿ ಬೊಮ್ಮಾಯಿ ಸುಳಿವು