Webdunia - Bharat's app for daily news and videos

Install App

ಅಪಘಾತದಲ್ಲಿ ಸಾವನ್ನಪ್ಪಿದ 13 ಜನರ ಕುಟುಂಬಕ್ಕೆ ಧನ ಸಹಾಯ ಮಾಡಿದ ಶಿವಣ್ಣ-ಗೀತಾ

Sampriya
ಸೋಮವಾರ, 8 ಜುಲೈ 2024 (18:02 IST)
Photo Courtesy X
ಶಿವಮೊಗ್ಗ: ಹಾವೇರಿಯಲ್ಲಿ ನಡೆದ ಅಪಘಾತದಲ್ಲಿ ಮೃತರಾದ ಭದ್ರಾವತಿ ತಾಲ್ಲೂಕಿನ ಎಮ್ಮೇಹಟ್ಟಿಯ 13 ಮಂದಿ ಹಾಗೂ ಇಬ್ಬರು ಗಾಯಾಳುಗಳ ಕುಟುಂಬವನ್ನು ನಟ ಶಿವರಾಜಕುಮಾರ್ ಹಾಗೂ ಗೀತಾ ದಂಪತಿ ಇಂದು ಭೇಟಿಯಾಗಿ 13 ಲಕ್ಷ ಪರಿಹಾರ ನೀಡಿದರು.

ಮಳೆಯ ನಡುವೆಯೂ ಎಮ್ಮೇಹಟ್ಟಿಯ ಮೃತರ ಮನೆಗಳಿಗೆ ಭೇಟಿ ನೀಡಿದ ಶಿವರಾಜ್‌ಕುಮಾರ್ ಗೀತಾ ದಂಪತಿ ಮೃತರ ಕುಟುಂಬಗಳಿಗೆ ಸಾಂತ್ವನ ತುಂಬಿದರು. ಈ ವೇಳೆ ಗಾಯಾಳುಗಳ ಪರಿಸ್ಥಿತಿ ಹಾಗೂ ಮೃತರ ಕುಟುಂಬದವರ ಪರಿಸ್ಥಿತಿಯನ್ನು ವಿಚಾರಿಸಿದರು.

ಅಪಘಾತದಲ್ಲಿ ಸಾವಿಗೀಡಾದ 13 ಮಂದಿಗೆ ₹10 ಲಕ್ಷ ಹಾಗೂ ಬದುಕುಳಿದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರಿಗೆ ಚಿಕಿತ್ಸಾ ವೆಚ್ಚವಾಗಿ ತಲಾ ₹1.5 ಲಕ್ಷ ನಗದು ಹಣ ನೀಡಿದರು.

ನಂತರ ಮಾತನಾಡಿದ ಶಿವರಾಜ್‌ಕುಮಾರ್‌ ಅವರು, ಧನ ಸಹಾಯ ಮಾಡಿದರು, ಕುಟುಂಬಸ್ಥರಿಗೆ ಶಾಶ್ವತ ನೆರವು ಕೊಡುವ ಅಗತ್ಯವಿದೆ. ಆ ನಿಟ್ಟಿನಲ್ಲಿ ಸಾವಿಗೀಡಾದವರ ಕುಟುಂಬದ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವುದಾಗಿ ಹೇಳಿದರು.

ಅಪಘಾತದ ನಂತರ ಸಾವಿಗೀಡಾದವರ ಕುಟುಂಬಗಳಿಗೆ ನೆರವು ಹಾಗೂ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸುವಲ್ಲಿ ಗ್ರಾಮಸ್ಥರು ತೋರಿದ ಕಾಳಜಿಯನ್ನು ಗೀತಾ ಶಿವರಾಜಕುಮಾರ್ ಶ್ಲಾಘಿಸಿದರು.

ಕುಟುಂಬದ ಎಲ್ಲ ಸದಸ್ಯರನ್ನು ಕಳೆದುಕೊಂಡಿರುವ ಅಂಗವಿಕಲೆ ಅರ್ಪಿತಾ ಭವಿಷ್ಯಕ್ಕೆ ನೆರವಾಗುವ ಭರವಸೆ ನೀಡಿದರು.

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಪಕ್ಷದ ಜಿಲ್ಲಾ ಹಿಂದುಳಿದ ವರ್ಗಗಳ ಸಮಿತಿ ಪ್ರಧಾನ ಕಾರ್ಯದರ್ಶಿ ಜಿ.ಡಿ.ಮಂಜುನಾಥ್ ಈ ವೇಳೆ ಇದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments