ಮುಂಬೈ: ಬೆಳಗಾವಿಯಲ್ಲಿ ಮರಾಠಿಗರ ಮೇಲೆ ಕರ್ನಾಟಕದ ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ ಮತ್ತು ಕೂಡಲೇ ಈ ವಿಷಯವಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮಧ್ಯ ಪ್ರವೇಶಿಸಬೇಕೆಂದು ಶಿವ ಸೇನೆ ಆಗ್ರಹಿಸಿದೆ.
ತನ್ನ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸುತ್ತಿದ್ದು, ಕಿರುಕುಳ ನೀಡುತ್ತಿದ್ದಾರೆ ಎಂದು ಶಿವ ಸೇನೆ ಆರೋಪಿಸಿದೆ. ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದಂದು ಮರಾಠಿ ಬೆಂಬಲಿಗರು ಕರಾಳ ದಿನ ಆಚರಿಸಿದ್ದರಿಂದ ಮತ್ತೆ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಪೊಲೀಸರು ತನ್ನ ಕಾರ್ಯಕರ್ತರನ್ನು ವಿನಾಕಾರಣ ಬಂಧಿಸಿದ್ದಾರೆ ಎಂದು ಅದು ದೂರಿದೆ.
ಈ ನಡುವೆ ಕರಾಳ ದಿನಾಚರಣೆಯಿಂದಾಗಿ ಗಡಿಯಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶಿಸಬೇಕೆಂದು ಕರ್ನಾಟಕದ ರಾಜಕೀಯ ನಾಯಕರು ಪತ್ರ ಬರೆದಿದ್ದಾರೆ. ಈ ಹಿನ್ನಲೆಯಲ್ಲಿ ಶಿವ ಸೇನೆ ಕೂಡಾ ರಾಜನಾಥ್ ಸಿಂಗ್ ಮಧ್ಯಸ್ಥಿಕೆಗೆ ಒತ್ತಾಯಿಸಿರಬಹುದು ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ