Select Your Language

Notifications

webdunia
webdunia
webdunia
webdunia

ಉಡುಪಿ ಕೃಷ್ಣನ ದರ್ಶನ ಪಡೆದ ಶೋಭಾ ಕರಂದ್ಲಾಜೆ

shoba karablaje
ಉಡುಪಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದ ಜನಾಶೀರ್ವಾದ ಯಾತ್ರೆ ಉಡುಪಿಗೆ ತಲುಪಿದ್ದು ಇಂದು ಉಡುಪಿಯಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಬೆಳಿಗ್ಗೆ ಸಚಿವೆ ಶೋಭಾ ಕರಂದ್ಲಾಜೆ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಕೈಗೊಂಡರು.

ಕಿಂಡಿಯ ಮೂಲಕ ಕಡಗೋಲು ಕೃಷ್ಣನ ದರ್ಶನ ಮಾಡಿದ ಸಚಿವೆ, ಬಳಿಕ ರಥಬೀದಿಯಲ್ಲಿರುವ ಅಷ್ಟ ಮಠಗಳಿಗೆ ಭೇಟಿ ನೀಡಿದರು. ಅನಂತೇಶ್ವರ, ಚಂದ್ರಮೌಳೇಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ ಪರ್ಯಾಯ ಅದಮಾರು ಮಠಾಧೀಶರೊಂದಿಗೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಪರ್ಯಾಯ ಶ್ರೀಗಳು ನೂತನ ಸಚಿವರಿಗೆ ಗೌರವ ಸಮರ್ಪಣೆ ಮಾಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಹಿಂದೂ ದೇವತೆಗಳನ್ನು ನಿಂದಿಸಿಲ್ಲ: ಸಚಿವ ಮುರುಗೇಶ್ ನಿರಾಣಿ