Webdunia - Bharat's app for daily news and videos

Install App

ಕಿಸಾನ್ ಮೇಳದಲ್ಲಿ ಶೋಭಾ ಕರಂದ್ಲಾಜೆ

Webdunia
ಮಂಗಳವಾರ, 30 ಆಗಸ್ಟ್ 2022 (18:31 IST)
ಡಿಆರ್‌ಡಿಒ ಸಂಸ್ಥೆ ಲಡಾಖಿನಲ್ಲಿ ಹಮ್ಮಿಕೊಂಡಿದ್ದ ಕಿಸಾನ್ ಮೇಳದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪಾಲ್ಗೊಂಡಿದ್ದರು. ಈ ವೇಳೆ ಲಡಾಕ್‍ನ ನಿಮ್ಮು ಪ್ರದೇಶಕ್ಕೆ ಭೇಟಿಕೊಟ್ಟಿದ್ದಾರೆ. ಉಡುಪಿ ಚಿಕ್ಕಮಗಳೂರು ಸಂಸದೆ ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಡಿಆರ್‌ಡಿಒ ನಡೆಸಿರುವ ರಾಷ್ಟ್ರ ಮಟ್ಟದ ಕೃಷಿ ಮೇಳ ಮತ್ತು ಕೃಷಿ ಉಪಕರಣಗಳ ಮಾಹಿತಿ ಕಾರ್ಯಾಗಾರದಲ್ಲಿ ಭಾಗಿಯಾಗಿದ್ದಾರೆ. ಆಧುನಿಕ ಮತ್ತು ಪಾರಂಪರಿಕ ಕೃಷಿ ಪದ್ಧತಿಗಳ ಬಗ್ಗೆ ರೈತರಿಗೆ ಅಧಿಕಾರಿಗಳು ಜನಪ್ರತಿನಿಧಿಗಳು ಚರ್ಚೆ ಮಾಡಿದ್ದಾರೆ. ಲಡಾಕ್ ಪ್ರವಾಸ ಸಂದರ್ಭ ಸಚಿವೆ ಶೋಭಾ ಕರಂದ್ಲಾಜೆ ಸಿಂಧೂ ನದಿಯ ಸಂಗಮ ಸ್ಥಳಕ್ಕೆ ಭೇಟಿಕೊಟ್ಟಿದ್ದಾರೆ. ಸಿಂಧೂ ನದಿಯ ತಟದಲ್ಲಿ ಕೆಲಕಾಲ ಕುಳಿತು ನದಿ ಹರಿವಿನ ಸೌಂದರ್ಯವನ್ನು ಕಣ್ತುಂಬಿಕೊಂಡಿದ್ದಾರೆ. ಹಿಂದೂ ಪುರಾಣಗಳಲ್ಲಿ ಉಲ್ಲೇಖಿತ ಪವಿತ್ರ ನದಿಗಳಲ್ಲಿ ಒಂದಾದ, ಸಿಂಧೂ ನದಿಯ ಸಂಗಮ ಸ್ಥಳಕ್ಕೆ ಭೇಟಿ ನೀಡುವ ಅವಕಾಶ ಒದಗಿ ಬಂತು. ಲೇಹ್ – ಲಡಾಖಿನ, ನಿಮ್ಮು ಎಂಬ ಪ್ರದೇಶದಲ್ಲಿ ಪವಿತ್ರ ಸಿಂಧೂ ನದಿಯು ಜಂಸ್ಕಾರ ನದಿಯೊಂದಿಗೆ ಸಂಗಮಗೊಳ್ಳುತ್ತದೆ. ಸರ್ಕಾರಿ ಕಾರ್ಯಕ್ರಮ ಸಂದರ್ಭ ಈ ಪವಿತ್ರ ಸ್ಥಳಕ್ಕೆ ಭೇಟಿಯಾಗುವ ಅವಕಾಶ ಸಿಕ್ಕಿತು ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments