Webdunia - Bharat's app for daily news and videos

Install App

ಭ್ರಷ್ಟ ಶೋಭಾ ಕರಂದ್ಲಾಜೆ ರಾಜಕೀಯಕ್ಕೆ ಬರುವ ಮುನ್ನವೇ ಎಸ್ಟೇಟ್ ಖರೀದಿಸಿದ್ರಾ?: ಪ್ರಸಾದ್ ಕಿಡಿ

Webdunia
ಶನಿವಾರ, 22 ನವೆಂಬರ್ 2014 (18:06 IST)
ಚಾಮರಾಜನಗರದ ಬಿಜೆಪಿ ಕಾರ್ಯಕರ್ತರು ಸಚಿವ ಮಹಾದೇವ್ ಪ್ರಸಾದ್‌ ಕಾರಿಗೆ ಮುತ್ತಿಗೆ ಹಾಕಿ ಕಳಂಕಿತ ನಾಲ್ವರು ಸಚಿವರನ್ನು ಕೈ ಬಿಡುವಂತೆ ಒತ್ತಾಯಿಸಿದ್ದಾರೆ.
 
ಇದರಿಂದ ಕೆಂಡಾಮಂಡಲವಾದ ಸಚಿವ ಪ್ರಸಾದ್, ನಿಮ್ಮ ನಾಯಕಿ ಶೋಭಾ ಕರಂದ್ಲಾಜೆ ರಾಜಕೀಯಕ್ಕೆ ಬರುವ ಮುನ್ನವೇ ಎಸ್ಟೇಟ್ ಖರೀದಿಸಿದ್ರಾ? ಯಡಿಯೂರಪ್ಪರ ವಿರುದ್ಧ ಭ್ರಷ್ಟಾಚಾರ ಆರೋಪಗಳಿಲ್ಲವಾ? ಎಂದು ಕಿಡಿಕಾರಿದ್ದಾರೆ. 
 
ಕಾಂಗ್ರೆಸ್ ಪಕ್ಷದ ನಾಲ್ವರು ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಸಾಬೀತುಪಡಿಸಿದಲ್ಲಿ ಅಂತಹವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದರು.  
 
ನಾವು ಬಿಜೆಪಿ ನಾಯಕರಂತೆ ಭೂಕಬಳಿಕೆ ಅಥವಾ ಭ್ರಷ್ಟಾಚಾರ ಮಾಡಿಲ್ಲ. ನಮ್ಮ ವಿರುದ್ಧ ಪ್ರತಿಭಟನೆ ಮಾಡಲು ಬಿಜೆಪಿ ನಾಯಕರಿಗೆ ಯಾವುದೇ ಹಕ್ಕಿಲ್ಲ ನೈತಿಕತೆಯೂ ಇಲ್ಲ
 
ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ, ಕರಂದ್ಲಾಜೆ, ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದ್ದಾರೆ. ಇಂತಹ ಭ್ರಷ್ಟ ರಾಜಕಾರಣಿಗಳ ವಿರುದ್ಧ ಸೂಕ್ತ ತನಿಖೆಯಾದರೆ ಎಲ್ಲರು ಕಳಂಕಿತರೆದಂದು ಸಾಬೀತಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments