Webdunia - Bharat's app for daily news and videos

Install App

ಕೇಂದ್ರ ಸರ್ಕಾರಕ್ಕೆ ಸುಳ್ಳು ವರದಿ ಕೊಟ್ಟರಾ ಶೋಭಾ ಕರಂದ್ಲಾಜೆ..?

Webdunia
ಬುಧವಾರ, 19 ಜುಲೈ 2017 (11:55 IST)
ಕೋಮು ಗಲಭೆಯಲ್ಲಿ ಹತ್ಯೆಗೀಡಾದವರ ಪಟ್ಟಿಯನ್ನ ಕೇಂದ್ರ ಸರ್ಕಾರಕ್ಕೆ ನೀಡಿರುವ ಸಂಸದೆ ಶೋಭಾ ಕರಂದ್ಲಾಜೆ ಬೇರೆ ಬೇರೆ ಕಾರಣಗಳಿಂದ ಮೃತಪಟ್ಟವರ ಹೆಸರುಗಳನ್ನ ಸೇರಿಸಿ 23 ಮಂದಿ ಕೋಮು ದಳ್ಳುರಿಗೆ ಬಲಿಯಾಗಿದ್ಧಾರೆಂದು ಕೇಂದ್ರ ಸರ್ಕಾರಕ್ಕೆ ಸುಳ್ಳು ವರದಿ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
 

ಸಹೋದರಿಯಿಂದ ಹತ್ಯೆಗೀಡಾದ ಕಾರ್ತಿಕ್ ರಾಜ್, ಆತ್ಮಹತ್ಯೆ ಮಾಡಿಕೊಂಡ ಮೂಡಬಿದಿರೆಯ ವಾಮನ ಪೂಜಾರಿ ಅವರನ್ನ ಹೆಸರನ್ನೂ ಕೇಂದ್ರಕ್ಕೆ ನೀಡಿರುವ ಪಟ್ಟಿಯಲ್ಲಿ ಸೇರಿಸಿದ್ದಾರೆ. ಇದೇವೇಲೆ, ಗಲಭೆ ವೇಳೆ, ಗಾಯಗೊಂಡಿರುವ ಅಶೋಕ್ ಪೂಜಾರಿ ಸಹ ಮೃತಪಟ್ಟಿದ್ದಾರೆಂದು ವರದಿ ನೀಡಿರುವುದಾಗಿ ತಿಳಿದುಬಂದಿದೆ. ವಿಪರ್ಯಾಸವೆಂದರೆ, ಶೋಭಾ ಕರಂದ್ಲಾಜೆ ನೀಡಿರುವ ಪಟ್ಟಿಯಲ್ಲಿ ಮೊದಲನೇ ಹೆಸರೇ ಅಶೋಕ್ ಪೂಜಾರಿ ಅವರದ್ದು. ಸೆಪ್ಟೆಂಬರ್ 20ರ 2015ರಂದು ಅಶೋಕ್ ಪೂಜಾರಿ ಹತ್ಯೆಗೀಡಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಆದರೆ, ಅಂದು ಅಶೋಕ್ ಪೂಜಾರಿ ಮೇಲೆ ಹಲ್ಲೆ ಮಾತ್ರ ನಡೆದಿದ್ದು, ಈಗಲೂ ಜೀವಂತವಾಗಿದ್ಧಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕೇಂದ್ರ ಸರ್ಕಾರದಿಂದ ಶಹಭಾಸ್`ಗಿರಿ ಗಿಟ್ಟಿಸಿಕೊಳ್ಳಲು ಶೋಭಾ ಕರಂದ್ಲಾಜೆ ಈ ವರದಿ ನೋಡಿದರೆ..? ರಾಜ್ಯದಲ್ಲಿ ಗಲಭೆಯಾಗು ಈ ಸಂದರ್ಭದಲ್ಲಿ ಶೋಭಾ ನೀಡಿರುವ ವರದಿ ಹಲವು ಪ್ರಶ್ನೆಗಳನ್ನ ಎತ್ತುವಂತೆ ಮಾಡಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಶೋಭಾ ಕರಂದ್ಲಾಜೆ, ತಪ್ಪಾಗಿರುವುದು ನಿಜ ಸರಿ ಮಾಡಿ ಮತ್ತೆ ಕಳುಹಿಸುವುದಾಗಿ ಹೇಳಿದ್ದಾರೆ. ಈ ವರದಿಯಿಂದ ಕೋಮು ದಳ್ಳುರಿ ಹೆಚ್ಚಿಸುವುದು ಶೋಭಾ ಕರಂದ್ಲಾಜೆ ಉದ್ದೇಶ ಎಂಬುದು ಸ್ಪಷ್ಟವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments