Webdunia - Bharat's app for daily news and videos

Install App

ಕಾಂಗ್ರೆಸ್ ಪರ ಪ್ರಚಾರ ಮಾಡಿದಕ್ಕೆ ದರ್ಶನ್‌ಗೆ ಶಾಮಿಯಾನ ಹಾಕಿ ರಕ್ಷಣೆ: ಶೋಭಾ ಕರಂದ್ಲಾಜೆ ಆಕ್ರೋಶ

sampriya
ಶುಕ್ರವಾರ, 14 ಜೂನ್ 2024 (18:16 IST)
Photo By X
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ನಟ ದರ್ಶನ್‌ ಅವರು ಕಾಂಗ್ರೆಸ್‌ ಪರ ಪ್ರಚಾರ ಮಾಡಿದ್ದಕ್ಕೆ ಇಂದು ಅವರಿರುವ ಠಾಣೆಗೆ ಶಾಮಿಯಾನ ಹಾಕಿ ರಕ್ಷಣೆ ನೀಡಲಾಗುತ್ತಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಅವರು ದೂರಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ಅಪರಾಧ ಪ್ರಕರಣಗಳು ಜಾಸ್ತಿಯಾಗುತ್ತಲೇ ಇವೆ. ಅದಲ್ಲದೆ ಕಾಂಗ್ರೆಸ್‌ ಕೊಲೆಗಾರರಿಗೆ ರಕ್ಷಣೆ ನೀಡುತ್ತಿದೆ. ಇನ್ನೂ ದರ್ಶನ್‌ ಅವರು ಕಾಂಗ್ರೆಸ್‌ ಪರ ಪ್ರಚಾರ ಮಾಡಿದ್ದಕ್ಕೆ ಇಂದು ಅವರು ತನಿಖೆ ಎದುರಿಸುತ್ತಿರುವ ಠಾಣೆಗೆ ಶಾಮಿಯಾನ ಹಾಕಿ ರಕ್ಷಣೆ ನೀಡಲಾಗುತ್ತಿದೆ ಎಂದರು.

ಇಂದು ಜನರಿಗೊಂದು ಕಾನೂನು, ದೊಡ್ಡವರಿಗೊಂದು ಕಾನೂನು, ಕಾಂಗ್ರೆಸ್ ಕಾರ್ಯಕರ್ತರಿಗೊಂದು ಕಾನೂನು ಎಂಬ ಸಂದೇಶವನ್ನು ಕಾಂಗ್ರೆಸ್ ಸರ್ಕಾರ ರವಾನಿಸಿದೆ . ಕಾನೂನು ರೀತಿಯಲ್ಲಿ ಸರ್ಕಾರ ಕ್ರಮ ವಹಿಸಲಿ. ಕೊಲೆಗಡುಕರ ರಕ್ಷಣೆಯನ್ನು ಸರ್ಕಾರ, ಪೊಲೀಸರು ಮಾಡಬಾರದು ಎಂದು ಶೋಭಾ ಹೇಳಿದರು.

ಇನ್ನೂ ಬಿಎಸ್‌ ಯಡಿಯೂರಪ್ಪ ಅವರು ಎದುರಿಸುತ್ತಿರುವ ಪೋಕ್ಸೋ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನಗೆ ಸರಿಯಾದ ಮಾಹಿತಿಯಿಲ್ಲ. ಮಾಧ್ಯಮದ ಮೂಲಕ ಅಷ್ಟೇ ನೋಡಿದ್ದೇನೆ. ಯಡಿಯೂರಪ್ಪ ಅವರ ಸುದೀರ್ಘವಾದ ರಾಜಕಾರಣ ನೋಡಿದ್ದೇನೆ. ಇದರಲ್ಲಿ ಸರ್ಕಾರದ ಪಾತ್ರದ ಬಗ್ಗೆ ಗೊತ್ತಿಲ್ಲ. ನ್ಯಾಯಾಲಯ ನೆಲದ ಕಾನೂನು ಎತ್ತಿ ಹಿಡಿಯಲಿದೆ. ಯಡಿಯೂರಪ್ಪ ವಿರುದ್ಧದ ಪ್ರಕರಣ ಜನ ಗಮನಿಸುತ್ತಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments