Webdunia - Bharat's app for daily news and videos

Install App

ಯಡಿಯೂರಪ್ಪ ಪತ್ನಿ ಸಾವಿನಲ್ಲಿ ಕೈವಾಡ: ಶೋಭಾ ಕರಂದ್ಲಾಜೆ ಮಹತ್ವದ ಪ್ರತಿಕ್ರಿಯೆ

Krishnaveni K
ಸೋಮವಾರ, 21 ಅಕ್ಟೋಬರ್ 2024 (12:55 IST)
ಬೆಂಗಳೂರು: ಬಿಜೆಪಿ ವರಿಷ್ಠ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪತ್ನಿ ದಿ.ಮೈತ್ರಾದೇವಿ ಸಾವಿಗೆ ಶೋಭಾ ಕರಂದ್ಲಾಜೆ ಕಾರಣ ಎಂದಿದ್ದ ಸಚಿವ ಭೈರತಿ ಸುರೇಶ್ ಆರೋಪಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಭೈರತಿ ಸುರೇಶ್ ಆರೋಪಕ್ಕೆ ಶೋಭಾ ಇಂದು ರೋಷಾವೇಷದಿಂದ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ‘ಭೈರತಿ ಸುರೇಶ್ ಒಬ್ಬ ದರೋಡೆಕೋರ. ಮುಡಾ ಹಗರಣದ ಬಗ್ಗೆ ತನಿಖೆಯಾಗುತ್ತದೆ ಎಂದಾದಾಗ ರಾತ್ರೋ ರಾತ್ರಿ ದಾಖಲೆಗಳನ್ನು ಹೊತ್ತೊಯ್ದರು. ಪೊಲೀಸರು ದಾಳಿ ಮಾಡಲು ಬಂದಾಗ ದರೋಡೆಕೋರರು ಪ್ರತಿದಾಳಿ ನಡೆಸುವ ಹಾಗೆ ಭೈರತಿ ಈಗ ಇಲ್ಲಸಲ್ಲದ ಆರೋಪದ ದಾಳಿ ಮಾಡುತ್ತಿದ್ದಾರೆ’ ಎಂದರು.

ಇನ್ನು, ಸಿಎಂ ಸಿದ್ದರಾಮಯ್ಯ ಪುತ್ರ ರಾಕೇಶ್ ಸಾವಿಗೆ ಇದೇ ಭೈರತಿ ಸುರೇಶ್ ಕಾರಣ ಅಂತ ಜನ ಮಾತನಾಡುತ್ತಿದ್ದಾರೆ. ಇದನ್ನು ಅವರು ಒಪ್ಪಿಕೊಳ್ಳುತ್ತಾರಾ ಎಂದು ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯನವರ ಉತ್ತರಾಧಿಕಾರಿಯಾಗುವ ಉದ್ದೇಶದಿಂದ ರಾಕೇಶ್ ಸಿದ್ದರಾಮಯ್ಯನವರನ್ನು ಅವರೇ ಕೊಂದರು ಎಂದರೆ ನಾವೂ ಆರೋಪ ಮಾಡುತ್ತೇವೆ. ಒಪ್ಪಿಕೊಳ್ಳುತ್ತಾರಾ ಅವರು ಎಂದು ಶೋಭಾ ಪ್ರಶ್ನೆ ಮಾಡಿದ್ದಾರೆ.

ನಾನು ಚಾಮುಂಡೇಶ್ವರಿ ದೇವಿಯ ಮುಂದೆ ನಿಂತು, ಸತ್ಯಪೂರ್ವಕವಾಗಿ ರಾಜಕಾರಣವನ್ನು ಸ್ವೀಕರಿಸಿದವಳು. ರಾಜಕೀಯಕ್ಕೋಸ್ಕರ ಕೊಲೆ, ದರೋಡೆ ಮಾಡುವವಳಲ್ಲ. ನಾನು ಓಡಿ ಹೋಗುತ್ತೇನೆ ಎಂದು ಕಾಂಗ್ರೆಸ್ ನ ಕೆಲವರು ತಮಾಷೆ ಮಾಡುತ್ತಿದ್ದಾರೆ. ಆದರೆ ನಾನು ಓಡಿ ಹೋಗುವವಳಲ್ಲ. ನಾನು ಇಲ್ಲಿಯೇ ಎದ್ದು ಸತ್ಯದ ದಾರಿಯಲ್ಲಿ ರಾಜಕಾರಣ ಮಾಡುವವಳು ಎಂದು ಶೋಭಾ ಗುಡುಗಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments