Publish Date: Wed, 03 May 2023 (12:35 IST)
Updated Date: Wed, 03 May 2023 (12:12 IST)
ಬೆಂಗಳೂರು : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿತು. ಅದರಲ್ಲಿ ಭಜರಂಗದಳ ನಿಷೇಧಿಸುವ ಕುರಿತು ಪ್ರಸ್ತಾಪಿಸಿತ್ತು. ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಶೋಭಾ ಕರಂದ್ಲಾಜೆ ಕೆಂಡಾಮಂಡಲರಾಗಿದ್ದಾರೆ.
ವಿನಾಶಕಾಲ ವಿಪರೀತ ಬುದ್ಧಿ ಅನ್ನುವಂತೆ ಇದೆ ಕಾಂಗ್ರೆಸ್ ನಡೆ. ಕಾಂಗ್ರೆಸ್ನ ವಿನಾಶ ಕಾಲ ಸಮೀಪಿಸಿದೆ. ಈಗಾಗಲೇ ಕೇಂದ್ರ ಸರ್ಕಾರ ಪಿಎಫ್ಐ ನಿಷೇಧ ಮಾಡಿದೆ. ಇವತ್ತು ಕಾಂಗ್ರೆಸ್ನವರು ಪಿಎಫ್ಐ ನಿಷೇಧ ಮಾಡ್ತೀವಿ.
ಜತೆಗೆ ಭಜರಂಗದಳ ನಿಷೇಧ ಮಾಡ್ತೀವಿ ಎಂದಿದ್ದಾರೆ. ಕಾಂಗ್ರೆಸ್ನವರ ಟಾರ್ಗೆಟ್ ಇರೋದು ಪಿಎಫ್ಐ ಅಲ್ಲ, ಅವರ ಟಾರ್ಗೆಟ್ ಭಜರಂಗದಳ ಎಂದು ವಾಗ್ದಾಳಿ ನಡೆಸಿದ್ದಾರೆ.