Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ರಕ್ಷಿಸಲು ಸಚಿವರೆಲ್ಲಾ ಒಟ್ಟಾಗಿದ್ದಾರೆ: ಶೋಭಾ ಕರಂದ್ಲಾಜೆ ಒತ್ತಾಯ

Krishnaveni K
ಶನಿವಾರ, 17 ಆಗಸ್ಟ್ 2024 (14:27 IST)
ಬೆಂಗಳೂರು: ಮುಖ್ಯಮಂತ್ರಿಯವರು ರಾಜೀನಾಮೆ ಕೊಟ್ಟು ಕಾನೂನು ಎದುರಿಸಬೇಕಿದೆ ಎಂದು ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ಒತ್ತಾಯಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ"ದಲ್ಲಿ ಇಂದು ಮಾಧ್ಯಮಗಳಿಗೆ ಬೈಟ್ ನೀಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ರಾಜ್ಯಪಾಲರು ಕಾನೂನಿನಂತೆ ಕ್ರಮ ಕೈಗೊಳ್ಳುವಂಥವರು. ನೆಲದ ಕಾನೂನು ಇದೆ. ಭ್ರಷ್ಟಾಚಾರ ತಡೆ ಕಾನೂನಿನಡಿ ಅವರು ಕ್ರಮ ಕೈಗೊಂಡಿದ್ದಾರೆ. ಅಬ್ರಹಂ, ಕೃಷ್ಣ ಅವರ ದೂರಿನ ಕುರಿತು ವರದಿ ತರಿಸಿಕೊಂಡು ತಜ್ಞರ ಜೊತೆ ಚರ್ಚಿಸಿ ಅವರು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು.

ಮುಖ್ಯಮಂತ್ರಿಯನ್ನು ರಕ್ಷಿಸಲು, ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ಸಚಿವರು ಏನನ್ನಾದರೂ ಮಾತನಾಡುತ್ತಾರೆ. ಆದರೆ, ಕಾನೂನನ್ನು ಎದುರಿಸಬೇಕಿದೆ. ಮುಖ್ಯಮಂತ್ರಿಗಳೇ, ನೀವು ರಾಜೀನಾಮೆ ಕೊಟ್ಟು ಕಾನೂನು ಎದುರಿಸಿ ಎಂದು ಆಗ್ರಹಿಸಿದರು.

ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದ ಅವರು, 2013ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ ಅವರ ವಿರುದ್ಧ 20ಕ್ಕೂ ಹೆಚ್ಚು ಕೇಸುಗಳು ಲೋಕಾಯುಕ್ತದಲ್ಲಿದ್ದವು. ತನ್ನನ್ನು ತಾನು ರಕ್ಷಿಸಿಕೊಳ್ಳಲು ಸಿದ್ದರಾಮಯ್ಯನವರು ಲೋಕಾಯುಕ್ತವನ್ನೇ ರದ್ದು ಮಾಡಿ ಅವರ ಕೇಸುಗಳನ್ನು ಎಸಿಬಿಗೆ ವರ್ಗಾವಣೆ ಮಾಡಿ ಮುಚ್ಚಿ ಹಾಕಿದ್ದರು ಎಂದು ಆಕ್ಷೇಪಿಸಿದರು.

ಕೆಂಪಯ್ಯನವರ ನೇತೃತ್ವದಲ್ಲಿ ಸಮಿತಿ ರಚಿಸಿದ್ದರು. ಆ ವರದಿ ಎಲ್ಲಿ ಹೋಯಿತೆಂದೇ ಗೊತ್ತಾಗಿಲ್ಲ. 5 ವರ್ಷ ಅಧಿಕಾರ ಪೂರ್ಣಗೊಳಿಸಿದ್ದರು. ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕಿತ್ತು ಎಂದ ಅವರು, ಒಂದು ವರ್ಷದಲ್ಲೇ ಸಿದ್ದರಾಮಯ್ಯನವರ ಮೇಲೆ ಎರಡು ಗುರುತರ ಆರೋಪಗಳಿವೆ. ವಾಲ್ಮೀಕಿ ನಿಗಮದ ಹಗರಣದಲ್ಲಿ 187 ಕೋಟಿಯ ಭ್ರಷ್ಟಾಚಾರದ ಆರೋಪವಿದೆ. ಇದು 187 ಕೋಟಿಯಲ್ಲ; ಕಡಿಮೆ ಮೊತ್ತದ್ದೆಂದು (79 ಕೋಟಿ) ಅವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಈ ಹಣವನ್ನು ತೆಲಂಗಾಣ ಚುನಾವಣೆಗೆ ಬಳಸಿಕೊಳ್ಳಲಾಗಿತ್ತು. ಕರ್ನಾಟಕದ ಪರಿಶಿಷ್ಟರು, ಬಡವರಿಗೆ ಮೀಸಲಿಟ್ಟ ಹಣವನ್ನು ಹೈಕಮಾಂಡ್ ನಿರ್ದೇಶನದಂತೆ ಸಿಎಂ ಅವರು ತೆಲಂಗಾಣದ ವೈನ್ ಶಾಪ್, ಜ್ಯುವೆಲ್ಲರಿ ಅಂಗಡಿಗಳಿಗೆ ಕೊಟ್ಟಿದ್ದರು ಎಂದು ಟೀಕಿಸಿದರು.

ವಾಲ್ಮೀಕಿ ನಿಗಮದ ಹಗರಣಕ್ಕೆ ನಾಗೇಂದ್ರ ಒಬ್ಬರೇ ಜವಾಬ್ದಾರರಲ್ಲ; ತೆಲಂಗಾಣಕ್ಕೆ ಚುನಾವಣೆಗೆ ಹಣ ನೀಡಲು ಹೈಕಮಾಂಡ್ ನಿಮಗೆ ಸೂಚನೆ ಕೊಟ್ಟಿರಬಹುದು ಎಂದು ಆಕ್ಷೇಪಿಸಿದರು. ಮುಡಾ ಕೇಸಿನಲ್ಲಿ ದಲಿತರ ಜಮೀನನ್ನು ನಿಮ್ಮ ಬಾವಮೈದ ತೆಗೆದುಕೊಂಡಿದ್ದರು. ಕಾನೂನುಬಾಹಿರವಾಗಿ ನಿಮ್ಮ ಹೆಂಡತಿಗೆ ಅದು ಬಂದಿತ್ತು. ಕಾನೂನುಬಾಹಿರವಾಗಿ ನಿಮ್ಮ ಹೆಂಡತಿ ವಿಜಯನಗರ 3ನೇ-4ನೇ ಹಂತದಲ್ಲಿ ಸೈಟ್ ಪಡೆದರು. ಈ ಎಲ್ಲ ಕಾಲದಲ್ಲಿ ನೀವು ಸಂವಿಧಾನಾತ್ಮಕ ಹುದ್ದೆಯಲ್ಲಿದ್ದುದಾಗಿ ಸಿದ್ದರಾಮಯ್ಯನವರಿಗೆ ತಿಳಿಸಿದರು.

ನೀವು ಸಚಿವ, ವಿಪಕ್ಷ ನಾಯಕ ಆಗಿದ್ದು, ಈಗ ಮುಖ್ಯಮಂತ್ರಿಯಾಗಿ ಇದ್ದೀರಿ. ಸಿದ್ದರಾಮಯ್ಯನವರು ಈ ಕೇಸನ್ನು ಕೂಡ ಮುಚ್ಚಿ ಹಾಕಲು ದೇಸಾಯಿ ಸಮಿತಿ ರಚಿಸಿದ್ದಾರೆ. ಮುಡಾ ಕೇಸು ಮುಚ್ಚಿ ಹಾಕುವುದೇ ಅವರ ಉದ್ದೇಶ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments