Webdunia - Bharat's app for daily news and videos

Install App

ದೇಶದ್ರೋಹ ಮಾಡಿದರೂ ಸಿದ್ದರಾಮಯ್ಯಗೆ ವೋಟ್ ಬ್ಯಾಂಕ್ ಮುಖ್ಯ: ಶೋಭಾ ಕರಂದ್ಲಾಜೆ

Krishnaveni K
ಮಂಗಳವಾರ, 17 ಸೆಪ್ಟಂಬರ್ 2024 (13:36 IST)
Photo Credit: Facebook
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಅಪರಾಧಿಗಳ ಮೇಲುಗೈ ಆಗುತ್ತಿದೆ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಕಳವಳ ವ್ಯಕ್ತಪಡಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ದೇಶದ್ರೋಹಿಗಳು ಮೇಲುಗೈ ಸಾಧಿಸುತ್ತಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರಿಗೆ ಶಿಕ್ಷೆ ವಿಧಿಸಿಲ್ಲ. ದೇಶದ್ರೋಹಕ್ಕೆ ಕುಮ್ಮಕ್ಕು ಕೊಡುವ ಸರಕಾರ ಅಧಿಕಾರದಲ್ಲಿದೆ ಎಂದು ಟೀಕಿಸಿದರು.

ಬೆಂಗಳೂರು, ಮೈಸೂರು, ಕೊಡಗು, ಹಾಸನ, ಕೋಲಾರ, ನಾಗಮಂಗಲ ಸೇರಿ ಬೇರೆ ಬೇರೆ ಜಾಗಗಳಲ್ಲಿ ಇವತ್ತು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಳಿಬರುತ್ತಿದೆ. ಪ್ಯಾಲೆಸ್ಟೀನ್ ಧ್ವಜ ಹಾರುತ್ತಿದೆ. ಆದರೆ, ರಾಜ್ಯ ಸರಕಾರ ಓಲೈಕೆ ರಾಜಕೀಯದಲ್ಲಿ ನಿರತವಾಗಿದೆ. ದೇಶದ್ರೋಹ ಮಾಡಿದರೂ ಅಡ್ಡಿ ಇಲ್ಲ; ನಮಗೆ ವೋಟ್ ಬ್ಯಾಂಕ್ ಬೇಕು ಎಂಬ ಮಾನಸಿಕತೆ ಇರುವ ಸಿದ್ದರಾಮಯ್ಯನವರಿಂದ ನಾವು ದೇಶಪ್ರೇಮ, ಕಾನೂನಿನ ಅನುಷ್ಠಾನ ನಿರೀಕ್ಷೆ ಮಾಡುವುದು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದರು.
 
ನಿನ್ನೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ ಘಟನೆ ಮತ್ತು ನಾಗಮಂಗಲದಲ್ಲಿ ನಡೆದ ಕೋಮುಗಲಭೆ ವಿಚಾರವಾಗಿ ವಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಲೇ ಇದೆ. ಇದೀಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments