Webdunia - Bharat's app for daily news and videos

Install App

ಸ್ವಾಭಿಮಾನವಿದ್ದರೆ ಶೋಭಾ ಕರಂದ್ಲಾಜೆ ರಾಜೀನಾಮೆ ನೀಡಲಿ ಎಂದ ಸಚಿವ ಖಾದರ್

Webdunia
ಶುಕ್ರವಾರ, 29 ಡಿಸೆಂಬರ್ 2017 (18:29 IST)
ಸ್ವಾಭಿಮಾನವಿದ್ದರೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ರಾಜೀನಾಮೆ ನೀಡಲಿ ಎಂದು ಆಹಾರ ಮತ್ತು ನಾಗರಿಕ ಖಾತೆ ಸಚಿವ ಯು.ಟಿ ಖಾದರ್ ಸವಾಲು ಹಾಕಿದ್ದಾರೆ.
 
ಪ್ರಧಾನಮಂತ್ರಿ ಮುಂದೆ ಮಾತನಾಡುವ  ಧೈರ್ಯ ಬಿಜೆಪಿಯ ಸಂಸದರಲ್ಲಿ ಇಲ್ಲ. ಆದರೆ ಇಲ್ಲಸಲ್ಲದ ರಾಜಕೀಯ ಮಾತ್ರ ಮಾಡುತ್ತಾರೆ.  ಕನ್ನಡಿಗರಿಗೆ ಅನ್ಯಾಯವಾಗಿದೆ ಎಂದು ರಾಜ್ಯವನ್ನು ಪ್ರತಿನಿಧಿಸುವ ಬಿಜೆಪಿ ಸಂಸದರು ರಾಜೀನಾಮೆ ನೀಡಲಿ ಎಂದು ಹೇಳಿದ್ದಾರೆ.
 
ಇಲ್ಲಿ ಮಾತನಾಡಿದಷ್ಟು ಶೋಭಾ ಕರಂದ್ಲಾಜೆ ಅವರು ಸಂಸತ್‌ನಲ್ಲಿ ಮಾತನಾಡಿದ್ದರೆ ಇಷ್ಟೊತ್ತಿಗೆ ಸಮಸ್ಯೆ ಬಗೆಹರಿಯುತ್ತಿತ್ತು. ಪ್ರಧಾನಮಂತ್ರಿ ಎರಡು ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
 
ಬಿಜೆಪಿಯವರು ರಾಜ್ಯದ ಮುಖ್ಯಮಂತ್ರಿಯನ್ನು ಸಭೆಗೆ ಕರೆಯುವುದೂ ಇಲ್ಲ, ಟ್ರಿಬ್ಯೂನಲ್‌ಗೆ ಅಫಡವಿಟ್ ಕೂಡ ನೀಡದೇ ಕೇವಲ ರಾಜಕಾರಣ ಮಾಡುತ್ತಿದ್ದಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments