Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಕ್ಷದ ಗೆಲ್ಲುವ ಭ್ರಮೆ ನುಚ್ಚು ನೂರಾಗಲಿದೆ: ಕರಂದ್ಲಾಜೆ

ಕಾಂಗ್ರೆಸ್ ಪಕ್ಷದ ಗೆಲ್ಲುವ ಭ್ರಮೆ ನುಚ್ಚು ನೂರಾಗಲಿದೆ: ಕರಂದ್ಲಾಜೆ
ನಂಜನಗೂಡು , ಸೋಮವಾರ, 3 ಏಪ್ರಿಲ್ 2017 (13:35 IST)
ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲ್ಲುವ ಭ್ರಮೆ ನುಚ್ಚು ನೂರಾಗಲಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
 
ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಆದರೆ, ಮತದಾರರು ಬಿಜೆಪಿ ಗೆಲ್ಲಿಸುವ ನಿರ್ಧಾರ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು.
 
ನಂಜನಗೂಡಿನಲ್ಲಿ ಚುನಾವಣೆ ಕಾವು ಹೆಚ್ಚುತ್ತಿದ್ದಂತೆ ಜನತೆ ಬಿಜೆಪಿ ಪರ ವಾಲುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯನವರ ದುರಾಡಳಿತಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
 
ಇಂದು ಚುನಾವಣೆ ಪ್ರಚಾರಕ್ಕಾಗಿ ಯಡಿಯೂರಪ್ಪ, ಎಸ್.ಎಂ.ಕೃಷ್ಣ ಸೇರಿದಂತೆ ಹಿರಿಯ ನಾಯಕರು ಆಗಮಿಸಲಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಚಿಕ್ಕಮ್ಮನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಅಣ್ಣನ ಮಗನನ್ನ ಕೊಚ್ಚಿ ಕೊಂದ ಚಿಕ್ಕಪ್ಪ