Select Your Language

Notifications

webdunia
webdunia
webdunia
webdunia

ಆನಂದ ಸಿಂಗ್ ಗೆ ಶಾಕ್ ನೀಡಿದ ಕಾಂಗ್ರೆಸ್ : ಸಭಾಧ್ಯಕ್ಷರಿಗೆ ದೂರು ಸಲ್ಲಿಕೆ

ಆನಂದ ಸಿಂಗ್ ಗೆ ಶಾಕ್ ನೀಡಿದ ಕಾಂಗ್ರೆಸ್ : ಸಭಾಧ್ಯಕ್ಷರಿಗೆ ದೂರು ಸಲ್ಲಿಕೆ
ಬೆಂಗಳೂರು , ಗುರುವಾರ, 4 ಜುಲೈ 2019 (19:49 IST)
ಮೈತ್ರಿ ಸರಕಾರದಲ್ಲಿ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುತ್ತಿರುವಂತೆ ಖಡಕ್ ನಿರ್ಧಾರಕ್ಕೆ ಕೈ ಪಡೆ ಮುಂದಾಗಿದ್ದು, ಸಭಾಧ್ಯಕ್ಷರಿಗೆ ದೂರು ನೀಡಿದೆ.

ಕಾಂಗ್ರೆಸ್ ಪಕ್ಷದ ಚಿಹ್ನೆಯಡಿ ಶಾಸಕ ಆನಂದ ಸಿಂಗ್ ಗೆದ್ದಿದ್ದಾರೆ. ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ಹಾಗಾಗಿ ಅವರ ರಾಜೀನಾಮೆಗೆ ಕಾರಣ ಬೇಕಾಗಿದೆ.

ಹೀಗಂತ ದೂರಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಡಿಸಿಎಂ ಪರಮೇಶ್ವರ್, ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಅವರು ಸಭಾಧ್ಯಕ್ಷ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ ಆನಂದ ಸಿಂಗ್ ರಾಜೀನಾಮೆ ಸಂಬಂಧವಾಗಿ ದೂರನ್ನು ಸಲ್ಲಿಸಿದ್ದಾರೆ.

ಸಭಾಧ್ಯಕ್ಷರನ್ನು ಭೇಟಿ ಮಾಡಿದ ಬಳಿಕ ಈಶ್ವರ ಖಂಡ್ರೆ ಹೇಳಿಕೆ ನೀಡಿದ್ದು, ಶಾಸಕ ಆನಂದ ಸಿಂಗ್ ಹೊರತುಪಡಿಸಿ ಮತ್ಯಾರೂ ರಾಜೀನಾಮೆ ನೀಡಿಲ್ಲ ಎಂದಿದ್ದಾರೆ.



 

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಮಂಡಿಸೋ ಬಜೆಟ್ ಮೇಲೆ ರಾಜ್ಯದ ಕಣ್ಣು