Publish Date: Thu, 04 Jul 2019 (19:49 IST)
Updated Date: Thu, 04 Jul 2019 (19:51 IST)
ಮೈತ್ರಿ ಸರಕಾರದಲ್ಲಿ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುತ್ತಿರುವಂತೆ ಖಡಕ್ ನಿರ್ಧಾರಕ್ಕೆ ಕೈ ಪಡೆ ಮುಂದಾಗಿದ್ದು, ಸಭಾಧ್ಯಕ್ಷರಿಗೆ ದೂರು ನೀಡಿದೆ.
ಕಾಂಗ್ರೆಸ್ ಪಕ್ಷದ ಚಿಹ್ನೆಯಡಿ ಶಾಸಕ ಆನಂದ ಸಿಂಗ್ ಗೆದ್ದಿದ್ದಾರೆ. ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ. ಹಾಗಾಗಿ ಅವರ ರಾಜೀನಾಮೆಗೆ ಕಾರಣ ಬೇಕಾಗಿದೆ.
ಹೀಗಂತ ದೂರಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಡಿಸಿಎಂ ಪರಮೇಶ್ವರ್, ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಅವರು ಸಭಾಧ್ಯಕ್ಷ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ ಆನಂದ ಸಿಂಗ್ ರಾಜೀನಾಮೆ ಸಂಬಂಧವಾಗಿ ದೂರನ್ನು ಸಲ್ಲಿಸಿದ್ದಾರೆ.
ಸಭಾಧ್ಯಕ್ಷರನ್ನು ಭೇಟಿ ಮಾಡಿದ ಬಳಿಕ ಈಶ್ವರ ಖಂಡ್ರೆ ಹೇಳಿಕೆ ನೀಡಿದ್ದು, ಶಾಸಕ ಆನಂದ ಸಿಂಗ್ ಹೊರತುಪಡಿಸಿ ಮತ್ಯಾರೂ ರಾಜೀನಾಮೆ ನೀಡಿಲ್ಲ ಎಂದಿದ್ದಾರೆ.