Webdunia - Bharat's app for daily news and videos

Install App

ಅಂಗಡಿ ಬಾಗಿಲು ತೆರೆದ ಮಾಲೀಕನಿಗೆ ಶಾಕ್ ?

Webdunia
ಶುಕ್ರವಾರ, 5 ಜುಲೈ 2019 (19:56 IST)
ಅಂಗಡಿ ಮಾಲೀಕನೊಬ್ಬ ಬೆಳಗ್ಗೆ ತನ್ನ ಅಂಗಡಿಯನ್ನು ತೆರೆದಾಗ ನಿಜಕ್ಕೂ ಶಾಕ್ ಗೆ ಒಳಗಾಗಿದ್ದಾನೆ.

ಮೊಬೈಲ್ ಅಂಗಡಿಯಲ್ಲಿ ಕಳ್ಳರ ಕೈಚಳಕ ನಡೆದಿದೆ. ಅಂಗಡಿ ಮೇಲ್ಭಾಗದ ಶೀಟ್ ಕಟ್ ಮಾಡಿ ಕಳ್ಳತನ ಮಾಡಿರುವ ಖದೀಮರು ಅಪಾರ ಮೌಲ್ಯದ ವಸ್ತುಗಳನ್ನು ಕದ್ದು ಒಯ್ದಿದ್ದಾರೆ.

ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಅತ್ತಿಬೆಲೆ ರಸ್ತೆಯಲ್ಲಿ ಘಟನೆ ನಡೆದಿದೆ. ಅತ್ತಿಬೆಲೆ ರಸ್ತೆಯಲ್ಲಿರುವ ಅಂಜನಾದ್ರಿ ಮೊಬೈಲ್ ಅಂಗಡಿಯಲ್ಲಿ ಕಳ್ಳರು ಕೈಚಳಕ ತೋರಿ ಪರಾರಿಯಾಗಿದ್ದಾರೆ. ರಾತ್ರಿ ನಡೆದಿರುವ ಘಟನೆ ಇದಾಗಿದೆ. ಸುಮಾರು ಇಪ್ಪತ್ತು ಸಾವಿರ ನಗದು ಸೇರಿದಂತೆ ಐವತ್ತು ಸಾವಿರ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಿದ್ದಾರೆ.

ಅಂಗಡಿ ಮಾಲೀಕ ಎಂದಿನಂತೆ ಮುಂಜಾನೆ ಅಂಗಡಿಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments