Select Your Language

Notifications

webdunia
webdunia
webdunia
webdunia

ಆ ಲಾರಿ ನೋಡಿದ ಪೊಲೀಸರಿಗೆ ಕಾದಿತ್ತು ಶಾಕ್

ಆ ಲಾರಿ ನೋಡಿದ ಪೊಲೀಸರಿಗೆ ಕಾದಿತ್ತು ಶಾಕ್
ಹುಬ್ಬಳ್ಳಿ , ಸೋಮವಾರ, 18 ಮೇ 2020 (18:51 IST)
ಬೆಂಗಳೂರಿನಿಂದ ಉತ್ತರಪ್ರದೇಶಕ್ಕೆ ಹೋಗುತ್ತಿದ್ದ ಸುಮಾರು 130 ವಲಸೆ ಕಾರ್ಮಿಕರನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಅನಧಿಕೃತವಾಗಿ ಖಾಸಗಿ ಕಂಟೇನರ್ ಲಾರಿ ಮೂಲಕ ಹುಬ್ಬಳ್ಳಿಗೆ ಆಗಮಿಸುತ್ತಿದ್ದಂತೆ ಬೆಂಡಿಗೇರಿ ಪೊಲೀಸ್ ಠಾಣೆ ಅಧಿಕಾರಿಗಳು ತಡೆದು ಪರಿಶೀಲನೆ ನಡೆಸಿದ್ದಾರೆ.

ಗಬ್ಬೂರ್ ಬೈ ಪಾಸ್ ಹತ್ತಿರ ಎರಡು ಕಂಟೇನರ್ ಲಾರಿ ಮೂಲಕ ಆಗಮಿಸಿದ ವಲಸೆ ಕಾರ್ಮಿಕರನ್ನು ತಡೆದು ದಾಖಲೆ ಪರಿಶೀಲನೆ ನಡೆಸಲಾಯಿತು. ಇನ್ನೂ ಎರಡು ಲಾರಿಯಲ್ಲಿ ಇಬ್ಬರು ಮಹಿಳೆಯರು  ಸೇರಿದಂತೆ 130 ವಲಸೆ ಕಾರ್ಮಿಕರು ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸುವವರೆಗೂ ಕೂಡ ಯಾವುದೇ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿಲ್ಲ.

ಜಿಲ್ಲಾಡಳಿತ ಶ್ರಮಿಕ್ ಎಕ್ಸ್‌ಪ್ರೆಸ್‌ ಮೂಲಕ ಉತ್ತರ ಪ್ರದೇಶಕ್ಕೆ ವಲಸೆ ಕಾರ್ಮಿಕರನ್ನು ಕಳಿಸಿಕೊಡುವ ಸಾಧ್ಯತೆಗಳು ಹೆಚ್ಚಾಗಿವೆ.



Share this Story:

Follow Webdunia kannada

ಮುಂದಿನ ಸುದ್ದಿ

ಗ್ರೀನ್ ಝೋನ್ ನಲ್ಲಿ ಡೆಡ್ಲಿ ಕೊರೊನಾ ಅಟ್ಟಹಾಸ