ಶೋಕಿಲಾಲ್ ಪ್ರಧಾನಿ ಅಂದ್ರೆ ಅದು ಮೋದಿ

Webdunia
ಬುಧವಾರ, 2 ಆಗಸ್ಟ್ 2023 (18:49 IST)
ಮಣಿಪುರದಲ್ಲಿ ಯುವತಿಯರನ್ನ ಬೆತ್ತಲೆ ಮಾಡಿದ್ದಾರೆ. ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗ್ತಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಣಿಪುರ ಹಿಂಸಾಚಾರಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ. ಸರ್ವೋಚ್ಚ ನ್ಯಾಯಾಲಯ ಕೇಂದ್ರ ಹಾಗೂ ಮಣಿಪುರ ಸರ್ಕಾರಕ್ಕೆ ಚಾಟಿ ಬೀಸಿದೆ. ಬೆತ್ತಲೆ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರವಾಗಿ 14 ದಿನಗಳಾದರೂ ಈ ಬಗ್ಗೆ ಪ್ರಕರಣ ದಾಖಲಿಸಿಲ್ಲ. IPC ಸೆಕ್ಷನ್ 356ರ ಪ್ರಕಾರ ಮಣಿಪುರದಲ್ಲಿ ನಿಯಮ ಉಲ್ಲಂಘನೆಯಾಗಿದೆ. ಹಾಗಾಗಿ‌ ಮಣಿಪುರವನ್ನ ರಾಷ್ಟ್ರಪತಿ ಆಡಳಿತಕ್ಕೆ ನೀಡಬೇಕು. ರಾಷ್ಟ್ರದ ರಾಷ್ಟ್ರ ಪತಿಗಳು ಏನು‌ ಮಾಡ್ತಿದ್ದಾರೆ? ಇದನ್ನ ರಾಷ್ಟ್ರಪತಿಗಳು ಗಮನಿಸುತ್ತಿಲ್ಲವೇ? ನಮ್ಮ ಪ್ರಧಾನಿಗಳು ಮೈಕಾಸುರರಾಗಿದ್ದಾರೆ. ಮೈಕ್ ಸಿಕ್ಕಿದ್ರೆ ಸಾಕು ಮೈಕಾಸುರರಾಗ್ತಾರೆ. ಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಮಿಸ್ಟರ್ ಮೋದಿ ನೀವು ಏನ್ಮಾಡ್ತಿದ್ದೀರಾ? ಅಲ್ಲಿಗೆ ಹೋಗೋಕೆ ನಿಮಗೆ ಸಮಯ ಇಲ್ವೇ ಎಂದು ಪ್ರಶ್ನಿಸಿದ್ರು. ಮೋದಿ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನ ಮುಳುಗಿಸ್ತಿದ್ದಾರೆ, ಶೋಕಿಲಾಲ್ ಪ್ರಧಾನಿ ಅಂದ್ರೆ ಅದು ಮೋದಿ ಎಂದು ಉಗ್ರಪ್ಪ ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ರಾಜಕೀಯದಲ್ಲಿ ಸಿಎಂ ನಿತೀಶ್ ಕುಮಾರ್‌ ಪುತ್ರನಿಗೆ ಸಿಗಲಿದೆಯಾ ದೊಡ್ಡ ಜವಾಬ್ದಾರಿ

ಅಲಿ ಖಮೇನಿ ಹತ್ಯೆ ಸಂಬಂಧ ಮೋದಿ ವಿರುದ್ಧ ಕಿಡಿಕಾರಿದ ಸೋನಿಯಾ ಗಾಂಧಿ

ಕನ್ನಡಿಗರ ರಕ್ಷಣೆಗೆ ಕೇಂದ್ರದ ಜೊತೆ ಮಾತುಕತೆ: ವಿಜಯೇಂದ್ರ

ತನ್ನ ಮಗ ಗೆಲ್ಲಲಿಲ್ಲ ಎಂದು ಪ್ರಜ್ವಲ್ ಅರೆಸ್ಟ್ ಆಗುವಂತೆ ಮಾಡಿದ್ದೇ ಕುಮಾರಸ್ವಾಮಿ: ಕದಲೂರು ಉದಯ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments