Webdunia - Bharat's app for daily news and videos

Install App

ಸ್ಫೋಟಕ ವಸ್ತು ಎಸೆದು ವ್ಯಕ್ತಿ ಪರಾರಿ

Webdunia
ಶುಕ್ರವಾರ, 1 ಜುಲೈ 2022 (20:56 IST)
ತಿರುವನಂತಪುರಂನಲ್ಲಿ ನಿನ್ನೆ ರಾತ್ರಿ ಆಡಳಿತಾರೂಢ CPI ರಾಜ್ಯ ಪ್ರಧಾನ ಕಚೇರಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಸ್ಫೋಟಕ ವಸ್ತು ಎಸೆದು ಪರಾರಿಯಾಗಿದ್ದಾನೆ. ಈ ದೃಶ್ಯ ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾತ್ರಿ 11.30ರ ಸುಮಾರಿಗೆ ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ರಾಜಧಾನಿಯ ಹೃದಯಭಾಗದಲ್ಲಿರುವ ಎಕೆಜಿ ಸೆಂಟರ್‌ಗೆ ಸ್ಫೋಟಕ ವಸ್ತು ಎಸೆದಿದ್ದಾನೆ. ಕೇಂದ್ರ ಕಚೇರಿಯಲ್ಲಿ ತಂಗಿದ್ದ ಪಕ್ಷದ ಕೆಲವು ಮುಖಂಡರು, ಕಟ್ಟಡದ ಹೊರಗೆ ಸ್ಫೋಟದ ಶಬ್ದ ಕೇಳಿಸಿದ್ದರಿಂದ ಹೊರ ಬಂದು ನೋಡಿದ್ದಾರೆ. ಬಳಿಕ ವಿಷಯ ತಿಳಿದು ಸ್ಥಳಕ್ಕಾಗಮಿಸಿದ CPI ಮುಖಂಡರು ಇದೊಂದು ಬಾಂಬ್ ದಾಳಿ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಕೇರಳ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments