ಆತ್ಮ ರಕ್ಷಣೆಗಾಗಿ ಆರೋಪಿ ಮೇಲೆ ಗುಂಡು

Webdunia
ಶನಿವಾರ, 16 ಜುಲೈ 2022 (19:36 IST)
ಕಾಂಗ್ರೆಸ್ ಮುಖಂಡ ಗಿರೀಶ ಕಂಬಾನೂರ ಕೊಲೆಯ ಪ್ರಮುಖ ಆರೋಪಿ ವಿಜಯ ಹಳ್ಳಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಲಬುರಗಿಯ ಶಹಬಾದ್ ಪಟ್ಟಣದ ಹೊರವಲಯದಲ್ಲಿ ಗುಂಡಿನ ದಾಳಿ ನಡೆಸಲಾಗಿದ್ದು, ಆರೋಪಿಯ ಬಲಗಾಲಿಗೆ ಗುಂಡೇಟು ತಗುಲಿದೆ.ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ‌ ಪಿಎಸ್ಐ ಸುವರ್ಣಾ ಅವರಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜುಲೈ 11ರಂದು ಶಹಬಾದ್ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ ಗಿರೀಶ ಕಂಬಾನೂರ ಕೊಲೆ ನಡೆದಿತ್ತು.ಪ್ರಕರಣದ ಆರೋಪಿ ವಿಜಯನನ್ನು ಬಂಧಿಸಿದ ಪೊಲೀಸರು, ಇಂದು ಬೆಳಗ್ಗೆ 7-30ರ ಸುಮಾರಿಗೆ ಕೊಲೆಗೆ ಬಳಸಿದ ಮಾರಕಾಸ್ತ್ರವೊಂದನ್ನು ಬಿಸಾಡಿದ ಸ್ಥಳ ಮಹಜರು ನಡೆಸಲು ಕರೆದೊಯ್ದಿದ್ದರು.ತಾನು ಬಿಸಾಡಿದ ಮಚ್ಚು ತೋರಿಸಿದ ಆರೋಪಿ, ಅದೇ ಮಚ್ಚಿನಿಂದ ಪಿಎಸ್ಐ ಸುವರ್ಣಾ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ತನಿಖಾಧಿಕಾರಿಯಾದ ಚಿತ್ತಾಪುರ ಸಿಪಿಐ ಪ್ರಕಾಶ ಯಾತನೂರ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ವಿಜಯಗೆ ಶರಣಾಗುವಂತೆ ಹೇಳಿದ್ದಾರೆ. ಆದರೂ ತಪ್ಪಿಸಿಕೊಳ್ಳಲು ಯತ್ನ ಮುಂದುವರೆಸಿದಾಗ ಆರೋಪಿಯ ಬಲಗಾಲಿಗೆ ಒಂದು ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಪ್ರಣಾಮ್ ಸಾಬ್ ಪ್ರೊಟೆಸ್ಟ್ ಮಾಡ್ತಿದ್ದೀನಿ.. ಬರ್ತ್ ಡೇ ದಿನ ಬಿವೈ ವಿಜಯೇಂದ್ರಗೆ ಅಮಿತ್ ಶಾ ಕಾಲ್ video

ಮೈಸೂರಿಗೆ ಫ್ಲೈ ಓವರ್ ಬೇಡವೇ ಬೇಡ: ಸಿಎಂಗೆ ಪತ್ರ ಬರೆದ ಸಂಸದ ಯದುವೀರ್ ಒಡೆಯರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments