Webdunia - Bharat's app for daily news and videos

Install App

ಕೆಲಸದಿಂದಲೇ ತೆಗೆದು ಹಾಕಬೇಕು - ಹೆಚ್​ಡಿಕೆ

Webdunia
ಗುರುವಾರ, 23 ಫೆಬ್ರವರಿ 2023 (16:32 IST)
ಇಬ್ಬರು ಮಹಿಳಾ ಅಧಿಕಾರಿಗಳ ಜಗಳ ವಿಚಾರಕ್ಕೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಸರ್ಕಾರ ಬಿಗಿ ಕ್ರಮ ತೆಗೆದುಕೊಂಡಿದ್ದರೆ ಹೀಗಾಗುತ್ತಿರಲಿಲ್ಲ. ಇಬ್ಬರನ್ನು ಸಸ್ಪೆಂಡ್ ಅಲ್ಲ, ಕೆಲಸದಿಂದಲೇ ತೆಗೆದು ಹಾಕಬೇಕು. ಅದರಲ್ಲೂ ಗೃಹ ಮಂತ್ರಿ ಆರಗ ಜ್ಞಾನೇಂದ್ರ ಅವರು ಅವರಿಬ್ಬರಿಗೆ ದೇವಮಾನವ ಎನ್ನುತ್ತಿದ್ದಾರೆ. ವಿಶ್ವಮಾನವ ಕುವೆಂಪು ಅವರ ಕ್ಷೇತ್ರದ ತೀರ್ಥಹಳ್ಳಿಯವರು ಈ ರೀತಿ ಮಾಡುತ್ತಾರೆ ಎಂದರೆ, ಏನು ಹೇಳಬೇಕು ಎಂದು ಆರಗ ಜ್ಞಾನೇಂದ್ರ ಬಗ್ಗೆ ಲೇವಡಿ ಮಾಡಿದ್ದಾರೆ. ಸದನದಲ್ಲಿ ಯಡಿಯೂರಪ್ಪ ವಿದಾಯ ಭಾಷಣದ ಬಗ್ಗೆ ಮಾತಾನಾಡಿದ ಕುಮಾರಸ್ವಾಮಿ, ಈ ಬಗ್ಗೆ ನಾನು ವಿರೋಧವಾಗಿ ಏನೂ ಹೇಳುವುದಿಲ್ಲ. ಅವರು ಪಾಪ ವಿದಾಯದ ಭಾಷಣ ಮಾಡಿದ್ದಾರೆ. ಎಲ್ಲರೂ ಕೂಡ ಒಂದಲ್ಲ ಒಂದು ದಿನ ಸದನದಲ್ಲಿ ವಿದಾಯದ ಭಾಷಣ ಮಾಡಲೇಬೇಕು. ಆದರೆ ಪಕ್ಷ ನನಗೆ ಎಲ್ಲವೂ ಕೊಟ್ಟಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಆದರೆ, 2013ರಲ್ಲಿ ಕೆಜೆಪಿ ಕಟ್ಟಿದಾಗ ಇವರಿಗೆ ಪಕ್ಷ ಏನೂ ನೀಡಿರಲಿಲ್ಲವೇ? ಆಗ ಇದೇ ಬಿಜೆಪಿ ಬಗ್ಗೆ ಇವರು ಏನೇನು ಭಾಷಣ ಮಾಡಿದ್ದರು. ಇವೆಲ್ಲ ದಾಖಲೆಗಳು ನಮ್ಮ ಬಳಿ ಇವೆ ಎಂದು ಕುಮಾರಸ್ವಾಮಿ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments