ಕೆಲಸದಿಂದಲೇ ತೆಗೆದು ಹಾಕಬೇಕು - ಹೆಚ್​ಡಿಕೆ

Webdunia
ಗುರುವಾರ, 23 ಫೆಬ್ರವರಿ 2023 (16:32 IST)
ಇಬ್ಬರು ಮಹಿಳಾ ಅಧಿಕಾರಿಗಳ ಜಗಳ ವಿಚಾರಕ್ಕೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಸರ್ಕಾರ ಬಿಗಿ ಕ್ರಮ ತೆಗೆದುಕೊಂಡಿದ್ದರೆ ಹೀಗಾಗುತ್ತಿರಲಿಲ್ಲ. ಇಬ್ಬರನ್ನು ಸಸ್ಪೆಂಡ್ ಅಲ್ಲ, ಕೆಲಸದಿಂದಲೇ ತೆಗೆದು ಹಾಕಬೇಕು. ಅದರಲ್ಲೂ ಗೃಹ ಮಂತ್ರಿ ಆರಗ ಜ್ಞಾನೇಂದ್ರ ಅವರು ಅವರಿಬ್ಬರಿಗೆ ದೇವಮಾನವ ಎನ್ನುತ್ತಿದ್ದಾರೆ. ವಿಶ್ವಮಾನವ ಕುವೆಂಪು ಅವರ ಕ್ಷೇತ್ರದ ತೀರ್ಥಹಳ್ಳಿಯವರು ಈ ರೀತಿ ಮಾಡುತ್ತಾರೆ ಎಂದರೆ, ಏನು ಹೇಳಬೇಕು ಎಂದು ಆರಗ ಜ್ಞಾನೇಂದ್ರ ಬಗ್ಗೆ ಲೇವಡಿ ಮಾಡಿದ್ದಾರೆ. ಸದನದಲ್ಲಿ ಯಡಿಯೂರಪ್ಪ ವಿದಾಯ ಭಾಷಣದ ಬಗ್ಗೆ ಮಾತಾನಾಡಿದ ಕುಮಾರಸ್ವಾಮಿ, ಈ ಬಗ್ಗೆ ನಾನು ವಿರೋಧವಾಗಿ ಏನೂ ಹೇಳುವುದಿಲ್ಲ. ಅವರು ಪಾಪ ವಿದಾಯದ ಭಾಷಣ ಮಾಡಿದ್ದಾರೆ. ಎಲ್ಲರೂ ಕೂಡ ಒಂದಲ್ಲ ಒಂದು ದಿನ ಸದನದಲ್ಲಿ ವಿದಾಯದ ಭಾಷಣ ಮಾಡಲೇಬೇಕು. ಆದರೆ ಪಕ್ಷ ನನಗೆ ಎಲ್ಲವೂ ಕೊಟ್ಟಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಆದರೆ, 2013ರಲ್ಲಿ ಕೆಜೆಪಿ ಕಟ್ಟಿದಾಗ ಇವರಿಗೆ ಪಕ್ಷ ಏನೂ ನೀಡಿರಲಿಲ್ಲವೇ? ಆಗ ಇದೇ ಬಿಜೆಪಿ ಬಗ್ಗೆ ಇವರು ಏನೇನು ಭಾಷಣ ಮಾಡಿದ್ದರು. ಇವೆಲ್ಲ ದಾಖಲೆಗಳು ನಮ್ಮ ಬಳಿ ಇವೆ ಎಂದು ಕುಮಾರಸ್ವಾಮಿ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕೋಳಿ ಅಂಕ ವಿಚಾರ, ನನ್ನ ಹೆಸರಿನಲ್ಲಿ ಅಪಪ್ರಚಾರ

ಮಹಾರಾಷ್ಟ್ರ: ಮಾರ್ಗ ಕಡಿತದಿಂದ 6ಕಿಮಿ ನಡೆದು ಆಸ್ಪತ್ರೆ ಸೇರಿದ ಗರ್ಭಿಣಿ ಸಾವು

ಸಿದ್ದರಾಮಯ್ಯ ಚಾಲನೆ ನೀಡಿದ ಅಂಬಾದೇವಿ ಮಹಾರಥೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗಿ

ಜನಾರ್ಧನ ರೆಡ್ಡಿ ಮೇಲೆ ಕೇಸ್ ಆಗಿದೆ ಭರತ್ ರೆಡ್ಡಿ ಮೇಲೆ ಯಾಕಿಲ್ಲ: ಎನ್ ರವಿಕುಮಾರ್

ದೇಶದಲ್ಲಿ ವೈಟ್ ಕಾಲರ್ ಭಯೋತ್ಪಾದನೆ ಆತಂಕಕಾರಿಯಾಗಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments