Webdunia - Bharat's app for daily news and videos

Install App

ಅನ್ಯ ಧರ್ಮದವರಿಗೆ ಧಕ್ಕೆ ಬರಬಾರದು: ಈದ್ಗಾ ಮೈದಾನದಲ್ಲಿ ಗಣೇಶನ ಕೂರಿಸಲು ನೂರೆಂಟು ರೂಲ್ಸ್

Krishnaveni K
ಬುಧವಾರ, 4 ಸೆಪ್ಟಂಬರ್ 2024 (10:44 IST)
Photo Credit: Facebook
ಹುಬ್ಬಳ್ಳಿ: ಈ ಬಾರಿ ಹುಬ್ಬಳ್ಳಿಯ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶನ ಕೂರಿಸಲು ಸ್ಥಳೀಯಾಡಳಿತ ಒಪ್ಪಿಗೆ ನೀಡಿದೆ. ಆದರೆ ನೂರೆಂಟು ಷರತ್ತು ವಿಧಿಸಿದೆ. ಆ ಷರತ್ತುಗಳೇನು ಇಲ್ಲಿದೆ ವಿವರ.

ಪ್ರತೀ ಬಾರಿಯೂ ಇಲ್ಲಿ ಗಣೇಶನ ಕೂರಿಸುವುದಕ್ಕೆ ಹಿಂದೂ ಸಂಘಟನೆಗಳು ಜಟಾಪಟಿಯನ್ನೇ ನಡೆಸಬೇಕಾಗುತ್ತದೆ. ಈ ಬಾರಿ ಮಹಾನಗರ ಪಾಲಿಕೆ ಗಣೇಶನ ಕೂರಿಸಲು ಒಪ್ಪಿಗೆಯೇನೋ ನೀಡಿದೆ. ಆದರೆ ಕೆಲವೊಂದು ಷರತ್ತುಗಳನ್ನು ವಿಧಿಸಿದ್ದು, ಅವುಗಳನ್ನು ಪಾಲಿಸಿದರೆ ಮಾತ್ರ ಅವಕಾಶ ಎಂದಿದೆ.

ಸೆಪ್ಟೆಂಬರ್ 7 ರಿಂದ ಸೆಪ್ಟೆಂಬರ್ 9 ರವರೆಗೆ ಮಾತ್ರ ಗಣೇಶನ ಕೂರಿಸಲು ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 9 ರ ಮಧ್ಯಾಹ್ನ 12 ಗಂಟೆಯೊಳಗೆ ಮೂರ್ತಿ ವಿಸರ್ಜನೆ ಮಾಡಿರಬೇಕು. ಮೂರ್ತಿ ಪ್ರತಿಷ್ಠಾಪನೆಗೆ ಮುನ್ನ ಕಡ್ಡಾಯವಾಗಿ ಪಾಲಿಕೆ ಮತ್ತು ಪೊಲೀಸರ ಅನುಮತಿ ಪಡೆದಿರಬೇಕು. ಸೆ. 7ರಂದು ಬೆಳಿಗ್ಗೆ 6 ಗಂಟೆಯಿಂದ 8 ಗಂಟೆಯೊಳಗಾಗಿ ಮೂರ್ತಿ ಪ್ರತಿಷ್ಠಾಪಿಸಿ ಸೆ.9 ರ ಮಧ್ಯಾಹ್ನ 12 ಗಂಟೆಯೊಳಗೆ ವಿಸರ್ಜನೆ ಮಾಡಬೇಕು.

ಇನ್ನು ಗಣೇಶನ ಮೂರ್ತಿ 30 ಅಡಿ ಉದ್ದ 30 ಅಡಿ ಅಗಲ ಮೀರಬಾರದು. ಪೊಲೀಸ್, ಪಾಲಿಕೆ ಅಥವಾ ಕಂದಾಯ ಇಲಾಖೆ ಸೂಚಿಸುವ ಜಾಗದಲ್ಲೇ ಪ್ರತಿಷ್ಠಾಪನೆ ಮಾಡಬೇಕು. ಅನುಮತಿ ಇರುವಷ್ಟು ಜಾಗದಲ್ಲಿ ಮಾತ್ರ ಪೆಂಡಾಲ್ ಹಾಕಬೇಕು. ಉತ್ಸವ ಮೂರ್ತಿಯ ಹೊರತು ಯಾವುದೇ ಭಾವುಟ, ಪ್ರಚೋದನಕಾರಿ ಫೋಟೋ, ಭಿತ್ತಿಪತ್ರ, ಬ್ಯಾನರ್ ಗಳಿಗೆ ಅವಕಾಶವಿಲ್ಲ. ಯಾವುದೇ ಪ್ರಚೋದನಕಾರೀ ಹಾಡು, ಡಿಜೆ ಸೌಂಡ್, ಧ್ವನಿ ವರ್ಧಕಗಳನ್ನುಬಳಸುವಂತಿಲ್ಲ.

ಸಾರ್ವಜನಿಕ ಗಣೇಶ ಉತ್ಸವ ಆಚರಣೆಗಾಗಿ ಪೆಂಡಾಲ್ ಗಳಲ್ಲಿ ವಾಣಿಜ್ಯ ಜಾಹೀರಾತು ಹಾಕಬಾರದು. ಕೋಮು ಸೌಹಾರ್ದತೆಯನ್ನು ಕಾಪಾಡಬೇಕು. ಗಲಾಟೆಗಳಿಗೆ ಆಸ್ಪದ ನೀಡಬಾರದು. ಪೊಲೀಸರು ಸೂಚಿಸದ ಸ್ಥಳದಲ್ಲಿ ಮೆರವಣಿಗೆ ಮಾಡಿ ಅವರು ಸೂಚಿಸಿದ ಸ್ಥಳದಲ್ಲೇ ಮೂರ್ತಿ ವಿಸರ್ಜನೆ ಮಾಡಬೇಕು.

ಸಮಾರಂಭ ಆಚರಿಸಿದ ಬಳಿಕ ಸ್ಥಳವನ್ನು ಸಂಪೂರ್ಣ ಸ್ವಚ್ಛ ಮಾಡಿ ಪಾಲಿಕೆ ಅಧಿಕಾರಿಗಳಿಗೆ ವರದಿ ನೀಡಬೇಕು. ಈದ್ಗಾ ಮೈದಾನದ ಸುತ್ತಮುತ್ತ ಪಟಾಕಿ ಹೊಡೆಯುವಂತಿಲ್ಲ. ಪ್ರಚೋದನಕಾರೀ ಭಾಷಣ ಮಾಡಬಾರದು. ಅನ್ಯ ಧರ್ಮೀಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತಹ ಯಾವುದೇ ಕಾರ್ಯಕ್ರಮ ಮಾಡುವಂತಿಲ್ಲ ಎಂದು ನೂರೆಂಟು ಷರತ್ತುಗಳನ್ನು ವಿಧಿಸಿ ಗಣೇಶನ ಕೂರಿಸಲು ಅನುಮತಿ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments