ಕೃಷ್ಣ ಅವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು: ಧರ್ಮಸಿಂಗ್

Webdunia
ಸೋಮವಾರ, 6 ಫೆಬ್ರವರಿ 2017 (17:55 IST)
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಅವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಮಾಜಿ ಸಿಎಂ ಧರ್ಮಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ವಿಜಯಪುರದ ಮುದ್ದೇಬಿಹಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮಹಾ ಸಮುದ್ರ ಇದ್ದಂತೆ. ಏನಾದರೂ ಹೆಚ್ಚು ಕಡಿಮೆ ಎನ್ನಿಸಿದೂ ಹೊಂದಿಕೊಂಡು ಹೋಗಬೇಕು ಎಂದರು. 
 
ಕೃಷ್ಣ ಅವರ ಮುಂದಿನ ನಡೆ ಇನ್ನೂ ಖಚಿತವಾಗಿಲ್ಲ. ಅವರು ಬಿಜೆಪಿ ಪಕ್ಷ ಸೇರುತ್ತಾರೆ ಎನ್ನುವುದು ಮಾಧ್ಯಮದ ಸೃಷ್ಟಿ. ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಹೈಕಮಾಂಡ್ ಪ್ರಯತ್ನ ನಡೆಸಿದೆ. ಕೃಷ್ಣ ಅವರು ಸಮಯ ಕೊಟ್ಟರೆ ನಾನು ಸಹ ಅವರ ಮನವೊಲಿಸುವ ಪ್ರಯತ್ನ ಮಾಡುತ್ತೇನೆ ಎಂದರು. 
 
ಕೃಷ್ಣ ಅವರು ಕಾಂಗ್ರೆಸ್ ಪಕ್ಷ ತೊರೆಯಲು ಕಾರಣ ಗೊತ್ತಾಗಲಿಲ್ಲ. ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಪ್ತ ವಲಯದಲ್ಲಿ ಕೆಲಸ ಮಾಡಿದ್ದಾರೆ. ಅವರು ಕಾಂಗ್ರೆಸ್ ಪಕ್ಷದಲ್ಲಿಯೇ ಮುಂದುವರೆಯಬೇಕು. ನಮಗೆ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದು ಮಾಜಿ ಸಿಎಂ ಧರ್ಮಸಿಂಗ್ ಮನವಿ ಮಾಡಿಕೊಂಡರು.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು: ಸಚಿವ ಮಧು ಬಂಗಾರಪ್ಪ

ವಿಮಾನ ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ, ವೃದ್ಧ ಪ್ರಯಾಣಿಕನ ವಿರುದ್ಧ ದೂರು

ಯಮುನಾ ಎಕ್ಸ್‌ಪ್ರೆಸ್‌ವೇ ಅಪಘಾತ, ಮೃತ 13 ಮಂದಿ ಕುಟುಂಬಕ್ಕೆ ಯೋಗಿ ₹2 ಲಕ್ಷ ಪರಿಹಾರ ಘೋಷಣೆ

ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

ಮುಂದಿನ ಸುದ್ದಿ
Show comments