Webdunia - Bharat's app for daily news and videos

Install App

ಯುವತಿಗೆ ಪಿಸ್ತೂಲ್ ತೋರಿಸಿ ಅತ್ಯಾಚಾರ

Webdunia
ಸೋಮವಾರ, 23 ಮೇ 2022 (19:58 IST)
ಯುವತಿಯನ್ನು ಪಿಸ್ತೂಲಿನಿಂದ ಬೆದರಿಸಿ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಓರ್ವನನ್ನು ಅಶೋಕನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
 
ಬಿಹಾರ ಮೂಲದ ಬೆಂಗಳೂರು ನಿವಾಸಿ ಅನಿಲ್ ರವಿಶಂಕರ್ ಪ್ರಸಾದ್ ಬಂಧಿತನಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಮೂರು ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ.
 
ಆರೋಪಿಯು ವ್ಯಾಪಾರಿ ಆಗಿದ್ದು, ಈತನಿಗೆ ಸೇರಿದ ಮನೆಯಲ್ಲಿ ಪಶ್ಚಿಮ ಬಂಗಾಳದ ಯುವತಿ ಕಳೆದ ಮಾರ್ಚ್‍ನಿಂದ ಬಾಡಿಗೆಗೆ ವಾಸಿಸುತ್ತಿದ್ದಳು. ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಯುವತಿಯೊಂದಿಗೆ ಮನೆಗೆ ಆಗಾಗ ಸ್ನೇಹಿತರು ಬರುತ್ತಿರುವ ಬಗ್ಗೆ ಮನೆ ಮಾಲಕ ತಗಾದೆ ತೆಗೆಯುತ್ತಿದ್ದನಂತೆ. ಇದೇ ವಿಚಾರಕ್ಕಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ.
 
ಕೆಲವು ದಿನಗಳ ಬಳಿಕ ಮನೆಯಲ್ಲಿ ಯುವತಿಯ ಸ್ನೇಹಿತನೊಬ್ಬ ಉಳಿದುಕೊಂಡಿದ್ದ. ಇದನ್ನು ಗಮನಿಸಿದ ಮಾಲಕ ಮನೆಯಾಚೆ ನಿಲ್ಲಿಸಿದ್ದ ಸ್ನೇಹಿತನ ಬೈಕ್‍ಅನ್ನು ವಶಕ್ಕೆ ಪಡೆದಿದ್ದಾನೆ ಎಂದು ಹೇಳಲಾಗುತ್ತಿದೆ.
 
ಇದಾದ ಬಳಿಕ ಎ.11ರಂದು ಆಕೆಯ ಮನೆಗೆ ಹೋದ ಮಾಲಕ ಮಾತನಾಡುವ ನೆಪದಲ್ಲಿ ತನ್ನ ಬಳಿಯಿದ್ದ ಪಿಸ್ತೂಲಿನಿಂದ ಬೆದರಿಸಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ನಡೆದಿದ್ದ ಕೃತ್ಯದ ಬಗ್ಗೆ ಇತ್ತೀಚೆಗೆ ಪೋಷಕರ ಬಳಿ ಯುವತಿ ಹೇಳಿಕೊಂಡಿದ್ದಾಳೆ. ಆಕೆಯನ್ನು ಸಮಾಧಾನಪಡಿಸಿ ನೀಡಿದ ದೂರಿನ ಮೇರೆಗೆ ಮನೆ ಮಾಲಕನನ್ನು ಬಂಧಿಸಿರುವ ಅಶೋಕನಗರ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments