Webdunia - Bharat's app for daily news and videos

Install App

ಫಿನಾಯಿಲ್ ವಾಸನೆ ತೋರಿಸಿ ಮನೆ ದೋಚಿದ ಖದೀಮರು

Webdunia
ಮಂಗಳವಾರ, 4 ಆಗಸ್ಟ್ 2020 (14:12 IST)
ಫಿನಾಯಿಲ್ ಸೇರಿದಂತೆ ಇತರೆ ವಾಸನೆಯಂತಹ ದ್ರಾವಣ ಮಾರಾಟ ಮಾಡುವ ನೆಪದಲ್ಲಿ ಖದೀಮರು ಮನೆಗಳನ್ನು ದೋಚುತ್ತಿದ್ದಾರೆ.

ಸಂಶಯಾಸ್ಪದ ಅಪರಿಚಿತ ಮಹಿಳೆಯರು ಮನೆ ಅಥವಾ ಓಣಿಗಳಲ್ಲಿ ಕಂಡು ಬಂದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಪೂರ್ವಾಪರ ತಿಳಿದುಕೊಳ್ಳದೇ, ಅಪರಿಚಿರೊಂದಿಗೆ ವ್ಯವಹರಿಸಬಾರದು ಎಂದು ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್. ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆ ಗೋಲಗುಂಬಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  6 ಜನ ಅಪರಿಚಿತ ಮಹಿಳೆಯರು ಫಿನಾಯಿಲ್ ಮಾರುವ ನೆಪದಲ್ಲಿ ಮನೆಗಳಿಗೆ ಹೋಗಿ, ಮನೆಯಲ್ಲಿರುವವರಿಗೆ ಫಿನಾಯಿಲ್ ಎಂದು ಯಾವುದೋ ದ್ರಾವಣದ ವಾಸನೆ ತೋರಿಸಿದ್ದಾರೆ.

ಫಿನಾಯಿಲ್ ವಾಸನೆ ತೆಗೆದುಕೊಂಡಾಕ್ಷಣ ಮನೆಯವರು ಮೂರ್ಛೆ ಹೋಗಿದ್ದಾರೆ. ನಂತರ ಮನೆಯೊಳಗೂ ಪ್ರವೇಶ ಮಾಡಿ ಅಲ್ಲಿರುವವರಿಗೂ ಮೂರ್ಛೆ ಹೋಗುವ ದ್ರಾವಣ ಸಿಂಪಡಿಸಿ ಮನೆಯಲ್ಲಿದ್ದ ಸುಮಾರು 4 ತೊಲೆಯಷ್ಟು ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ.

ಹೀಗಾಗಿ ಗದಗ ಜಿಲ್ಲೆಯ ಜನರು ಅಪರಿಚಿತ ವ್ಯಕ್ತಿಗಳು ಫಿನಾಯಿಲ್ ಹಾಗೂ ಇನ್ನಿತರ ದ್ರಾವಣ ಮಾರಾಟ ಮಾಡಲು ಬಂದಾಗ ವಾಸನೆ ತೆಗೆದುಕೊಳ್ಳದೇ ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments