ಸಿದ್ದಗಂಗಾ ಮಠದ ಶ್ರೀಗಳಾದ ಡಾ.ಶಿವಕುಮಾರ್ ಸ್ವಾಮಿಜಿ ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಠದ ಮೂಲಗಳು ತಿಳಿಸಿವೆ.
ಶ್ರೀ ಶಿವಕುಮಾರ ಸ್ವಾಮೀಜಿಗಳು ಕಫ ಮತ್ತು ಜ್ವರದಿಂದ ಬಳಲುತ್ತಿದ್ದರಿಂದ ನಗರದ ಖ್ಯಾತ ಬಿಜೆಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವೈದ್ಯರು, ಶ್ರೀಗಳು ಶೀಘ್ರದಲ್ಲಿಯೇ ಗುಣಮುಖರಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ಶೀತ ಹವಾಮಾನದಿಂದಾಗಿ ಶ್ರೀ ಶಿವಕುಮಾರ್ ಸ್ವಾಮಿಜಿಗಳು ಕಫದ ತೊಂದರೆಯಿಂದ ಬಳಲುತ್ತಿದ್ದು, ಸ್ವಲ್ಪ ಮಟ್ಟಿನ ಜ್ವರವಿದೆ. ನಾಳೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು. ಆತಂಕ ಬೇಡ ಎಂದು ಬಿಜೆಎಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಶ್ರೀ ಶಿವಕುಮಾರ ಸ್ವಾಮಿಜಿಗಳು ಆರೋಗ್ಯವಾಗಿದ್ದು ಭಕ್ತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಮಠದ ವ್ಯವಸ್ಥಾಪಕರು ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ