Webdunia - Bharat's app for daily news and videos

Install App

ಬಿಜಿಎಸ್​ ಆಸ್ಪತ್ರೆಗೆ ದಾಖಲಾದ ಶ್ರೀ ಶಿವಕುಮಾರ ಸ್ವಾಮಿಜಿ

Webdunia
ಶುಕ್ರವಾರ, 24 ಜೂನ್ 2016 (17:07 IST)
ಸಿದ್ದಗಂಗಾ ಮಠದ ಶ್ರೀಗಳಾದ ಡಾ.ಶಿವಕುಮಾರ್ ಸ್ವಾಮಿಜಿ ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಠದ ಮೂಲಗಳು ತಿಳಿಸಿವೆ. 
 
ಶ್ರೀ ಶಿವಕುಮಾರ ಸ್ವಾಮೀಜಿಗಳು ಕಫ ಮತ್ತು ಜ್ವರದಿಂದ ಬಳಲುತ್ತಿದ್ದರಿಂದ ನಗರದ ಖ್ಯಾತ ಬಿಜೆಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವೈದ್ಯರು, ಶ್ರೀಗಳು ಶೀಘ್ರದಲ್ಲಿಯೇ ಗುಣಮುಖರಾಗಲಿದ್ದಾರೆ ಎಂದು ತಿಳಿಸಿದ್ದಾರೆ. 
 
ಶೀತ ಹವಾಮಾನದಿಂದಾಗಿ ಶ್ರೀ ಶಿವಕುಮಾರ್ ಸ್ವಾಮಿಜಿಗಳು ಕಫದ ತೊಂದರೆಯಿಂದ ಬಳಲುತ್ತಿದ್ದು, ಸ್ವಲ್ಪ ಮಟ್ಟಿನ ಜ್ವರವಿದೆ. ನಾಳೆ ಅವರನ್ನು ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಮಾಡಲಾಗುವುದು. ಆತಂಕ ಬೇಡ ಎಂದು ಬಿಜೆಎಸ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. 
 
ಶ್ರೀ ಶಿವಕುಮಾರ ಸ್ವಾಮಿಜಿಗಳು ಆರೋಗ್ಯವಾಗಿದ್ದು ಭಕ್ತರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಮಠದ ವ್ಯವಸ್ಥಾಪಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments