Webdunia - Bharat's app for daily news and videos

Install App

ಮೇಲುಕೋಟೆಯಲ್ಲಿ ಶ್ರೀ ವೈರಮುಡಿ ಕಿರೀಟ ಧಾರಣ ಮಹೋತ್ಸವ : ಸಿದ್ಧತೆ ಶುರು

Webdunia
ಗುರುವಾರ, 27 ಫೆಬ್ರವರಿ 2020 (21:15 IST)
ಚಲುವನಾರಾಯಣಸ್ವಾಮಿ ದೇವರ ಶ್ರೀವೈರಮುಡಿ ಕಿರೀಟ ಧಾರಣಾ ಮಹೋತ್ಸವ ಕಾರ್ಯಕ್ರಮಕ್ಕೆ ಈಗಿನಿಂದಲೇ ಸಿದ್ಧತೆಗಳು ಶುರುವಾಗಿವೆ.

ಮೇಲುಕೋಟೆಯಲ್ಲಿ ಏಪ್ರಿಲ್  2 ರಂದು ನಡೆಯಲಿರುವ ಚಲುವನಾರಾಯಣಸ್ವಾಮಿ ದೇವರ ಶ್ರೀವೈರಮುಡಿ ಕಿರೀಟ ಧಾರಣಾ ಮಹೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ಸೂಚಿಸಿದರು.

ಶ್ರೀ ಚಲುವನಾರಾಯಣಸ್ವಾಮಿ ವೈರಮುಡಿ ಕಿರೀಟಧಾರಣ ಬ್ರಹ್ಮೋತ್ಸವ-2020ರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವೈರಮುಡಿ ಬ್ರಹ್ಮೋತ್ಸವ ಪ್ರಯುಕ್ತ ಮೇಲುಕೋಟೆ ಶ್ರೀ ಚಲುವನಾರಾಯಣಸ್ವಾಮಿ ದೇಗುಲದಲ್ಲಿ ಮಾರ್ಚ್ 28 ರಿಂದ   ಏಪ್ರಿಲ್‌ 9 ರವರೆಗೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.

ಏಪ್ರಿಲ್ 2 ರಂದು ಶ್ರೀವೈರಮುಡಿ ಕಿರೀಟಧಾರಣ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ಶ್ರೀಕ್ಷೇತ್ರದಲ್ಲಿ ಕುಡಿಯುವ ನೀರು ಸರಬರಾಜು ಮಾಡುವುದು ಹಾಗೂ ಅಗತ್ಯವಾದ ಮೂಲ ಸೌಕರ್ಯದ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು.

ವೈರಮುಡಿ ಉತ್ಸವಕ್ಕೆ ರಾಜ್ಯ ಮತ್ತು ಹೊರರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಶುದ್ಧವಾದ ಕುಡಿಯುವ ನೀರು, ಸ್ವಚ್ಛತೆ, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ, ಆಂಬ್ಯುಲೆನ್ಸ್‌ ವ್ಯವಸ್ಥೆ ಹಾಗೂ ಶಾಂತಿ ಸುವ್ಯವಸ್ಥೆ ಪಾಲನೆ ಮತ್ತು ಭದ್ರತಾ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳು ಕಾಳಜಿವಹಿಸಬೇಕು ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments