Select Your Language

Notifications

webdunia
webdunia
webdunia
webdunia

ಶಾಸಕ ಶ್ರೀನಿವಾಸಗೌಡ ಪುತ್ರನ ಕಾರು ಅಪಘಾತ

ಶಾಸಕ ಶ್ರೀನಿವಾಸಗೌಡ ಪುತ್ರನ ಕಾರು ಅಪಘಾತ
bangalore , ಶುಕ್ರವಾರ, 2 ಜುಲೈ 2021 (17:45 IST)
ಶಾಸಕ ಶ್ರೀನಿವಾಸ ಗೌಡ ಪುತ್ರ ಪ್ರಯಾಣಿಸುತ್ತಿದ್ದ ಕಾರು ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡ ಪುತ್ರನನ್ನು ಸ್ವತಃ ಶ್ರೀನಿವಾಸ ಗೌಡ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಚಿಕ್ಕಬಳ್ಳಾಪುರದ ಚಿಂತಾಮಣಿ ಬಳಿ ಗುರುವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದ್ದು, ಶ್ರೀನಿವಾಸಗೌಡ ಪುತ್ರ  ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿಂತಾಮಣಿಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ಬೀಚಗೊಂಡಹಳ್ಳಿ ಟೋಲ್ ಅಗ್ರಹಾರ ನಡುವೆ ಅಪಘಾತ ಸಂಭವಿಸಿದ್ದು, ಗಾಯಗೊಂಡಿರುವ ಮಂಜುನಾಥ್ ಅವರನ್ನು ಶಾಸಕರು ತಮ್ಮ ಕಾರಿನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನ ಬನಶಂಕರಿ ದೇವಾಲಯದ ಬಳಿ ವ್ಯಕ್ತಿಯ ಬರ್ಬರ ಹತ್ಯೆ