Webdunia - Bharat's app for daily news and videos

Install App

ಶ್ರೀನಿವಾಸ್ ಪ್ರಸಾದ್ ಕೇವಲ ರಾಜ್ಯ ನಾಯಕರಲ್ಲ, ರಾಷ್ಟ್ರ ನಾಯಕರು: ಬಿಜೆಪಿ

Webdunia
ಭಾನುವಾರ, 16 ಅಕ್ಟೋಬರ್ 2016 (15:15 IST)
ವಿ. ಶ್ರೀನಿವಾಸ್ ಪ್ರಸಾದ್ ಕೇವಲ ರಾಜ್ಯ ನಾಯಕರಲ್ಲ, ರಾಷ್ಟ್ರ ನಾಯಕರು ಎಂದು ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ  ಡಿ.ಎಸ್. ವೀರಯ್ಯ ಹೇಳಿದ್ದಾರೆ.
 
ಕಾಂಗ್ರೆಸ್ ತ್ಯಜಿಸುತ್ತಿರುವ ಹಿರಿಯ ನಾಯಕರನ್ನು ತಮ್ಮ ಪಕ್ಷಕ್ಕೆ ಸೆಳೆದುಕೊಳ್ಳುವ ಪ್ರಯತ್ನವಾಗಿ ಇಂದು ಅವರು ಮೈಸೂರಿಗೆ ಆಗಮಿಸಿದ್ದರು.
 
ಪ್ರಸಾದ್ ಅವರ ಜತೆ ಮಾತುಕತೆ ನಡೆಸಿ ವರದಿಗಾರರೊಂದಿಗೆ ಮಾತನ್ನಾಡುತ್ತಿದ್ದ ಅವರು, ಒಂದು ಸಮುದಾಯಕ್ಕೆ ಸೀಮತರಾದವರಲ್ಲ ಪ್ರಸಾದ್, ಎಲ್ಲ ಸಮುದಾಯದವರ ಜತೆ ಒಡನಾಟ ಇಟ್ಟುಕೊಂಡಿದ್ದಾರೆ. ಅವರು ಕೇವಲ ರಾಜ್ಯ ನಾಯಕರಲ್ಲ, ರಾಷ್ಟ್ರ ನಾಯಕರು. ಕಾಂಗ್ರೆಸ್ ಅವರನ್ನು ತಿರಸ್ಕಾರ ಮಾಡಿದೆ. ಪ್ರಸಾದ್, ಬಿಜೆಪಿ ಸೇರಿದರೆ ಪಕ್ಷ ಮತ್ತಷ್ಟು ಬಲಗೊಳ್ಳಲಿದೆ. ಅವರಿಗೆ ಸದಾ ಸ್ವಾಗತ. ನಮ್ಮ ಪಕ್ಷದ ಹಿರಿಯ ನಾಯಕರು ಅವರ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ .
 
ಪ್ರಸಾದ್ 'ಕೈ' ಬಿಡುತ್ತಿದ್ದಾರೆ ಎಂಬ ಸಂಗತಿ ಹೊರ ಬರುತ್ತಿದ್ದಂತೆ ಅವರ ನಿವಾಸವೀಗ ರಾಜಕೀಯ ಬೆಳವಣಿಗೆಯ ತಾಣವಾಗಿ ಬದಲಾಗಿದೆ. ಜೆಡಿಎಸ್, ಬಿಜೆಪಿ ಅವರನ್ನು ತಮ್ಮೆಡೆಗೆ ಸೆಳೆದುಕೊಳ್ಳಲು ರಾಜಕೀಯ ಕಸರತ್ತು ನಡೆಸುತ್ತಿದ್ದು ಪ್ರಸಾದ್ ಯಾವ ಪಕ್ಷದ ತೆಕ್ಕೆಗೆ ಸೇರುತ್ತಾರೆ ಎಂಬುದು ಸದ್ಯದಲ್ಲೇ ಬಹಿರಂಗವಾಗಲಿದೆ. ನಿನ್ನೆ ಸ್ಥಳೀಯ ಮುಖಂಡ ಪ್ರತಾಪ್ ಸಿಂಹ ಮತ್ತು ಬಿಜೆಪಿ ಇತರ ನಾಯಕರ ನಿಯೋಗ ಪ್ರಸಾದ್ ಅವರನ್ನು ಭೇಟಿಯಾದ ಮುಂದುವರೆದ ಭಾಗವಾಗಿ ವಿಧಾನಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ನೇತೃತ್ವದ ನಿಯೋಗ ಕೂಡ ಕೈ ನಾಯಕನ ಜತೆ ಮಾತುಕತೆ ನಡೆಸಿತು.
 
ನಾಳೆ 12 ಗಂಟೆಗೆ ಸಭಾಪತಿ ಕೆ.ಬಿ. ಕೋಳವಾಡ ಅವರನ್ನು ಭೇಟಿಯಾಗಿ ಶಾಸಕ ರಾಜೀನಾಮೆ ಸಲ್ಲಿಸುತ್ತೇನೆ. ಬಳಿಕ ಕಾಂಗ್ರೆಸ್ ಪಕ್ಷಕ್ಕೂ ಗುಡ್ ಬೈ ಹೇಳುತ್ತೇನೆ ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ ಮತ್ತೆ ಸ್ಪಷ್ಟಪಡಿಸಿದ್ದಾರೆ. 
 
ಪಕ್ಷ ತೊರೆದ ನಂತರ, ಕಾರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ನಡೆಯನ್ನಿಡುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments