ಶೃತಿ ಬೆಳ್ಳಕ್ಕಿಗೆ ಸಿಕ್ತು ಜಾಮೀನು

Webdunia
ಶುಕ್ರವಾರ, 26 ಏಪ್ರಿಲ್ 2019 (15:03 IST)
ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಶೃತಿ ಬೆಳ್ಳಕ್ಕಿಗೆ ಜಾಮೀನು ಮಂಜೂರು ಆಗಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ಧಾರವಾಡದ ಪ್ರಥಮ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಆಚಪ್ಪ ದೊಡ್ಡ ಬಸವರಾಜ ಅವರು, ಶೃತಿ ಬೆಳ್ಳಕ್ಕಿ ಅವರಿಗೆ  ಜಾಮೀನು  ಮಂಜೂರು ಮಾಡಿದರು.

ಹಿರಿಯ ವಕೀಲರಾದ ಆರ್. ಯು. ಬೆಳ್ಳಕ್ಕಿ ಅವರು ಶೃತಿ ಪರ ಸುದೀರ್ಘವಾದ ಮಂಡಿಸಿದರು. ಆಕೆಯೂ ಕಾನೂನು ವಿದ್ಯಾರ್ಥಿಯಾಗಿದ್ದು, ಅವಳು ಯಾವುದೇ ದುರುದ್ದೇಶದಿಂದ ಆ ಮಾತುಗಳನ್ನು ಹೇಳಿಲ್ಲ.

ಅಲ್ಲದೆ, ಅವಳು ಮಾಡಿರುವ ಆರೋಪಗಳು ಯಾವುದೇ ಗಂಭೀರವಾದ ಆರೋಪಗಳು ಅಲ್ಲ. ತನ್ನ ಧರ್ಮದ ರಕ್ಷಣೆಗಾಗಿ ಆಕೆ ಮಾತನಾಡಿದ್ದಾಳೆ. ಹೀಗಾಗಿ ಮಾನ್ಯ ನ್ಯಾಯಾಲಯವು ಆಕೆಗೆ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.
ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಾಧೀಶರು  ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದರು.

ಬಳಿಕ ಶೃತಿ ಬೆಳ್ಳಕ್ಕಿಯವರನ್ನು  ಧಾರವಾಡ ಕೇಂದ್ರ ಕಾರಾಗೃಹದ ಮಹಿಳಾ ವಿಭಾಗದಿಂದ ಬಿಡುಗಡೆಗೊಳಿಸಲಾಯಿತು. 
ಶೃತಿ ಜೈಲಿನಿಂದ ಬಿಡುಗಡೆಗೊಳ್ಳುತ್ತಿದ್ದಂತೆ ಬಿಜೆಪಿ ಶಾಸಕ ಅಮೃತ ದೇಸಾಯಿ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಸ್ವಾಗತಿಸಿ, ಸಿಹಿ ತಿನ್ನಿಸಿ ಬರ ಮಾಡಿಕೊಂಡರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಎಚ್ಚರಿಕೆ

ನೆಚ್ಚಿನ ರೆಸಾರ್ಟ್‌ನಲ್ಲೇ ಮಣ್ಣಾದ ಸಿಜೆ ರಾಯ್‌

ಇಂದೋರ್‌ ಮ್ಯಾರಥಾನ್‌ ವೇಳೆ 25 ವರ್ಷದ ಓಟಗಾರ ಹೃದಯಾಘಾತಕ್ಕೆ ಬಲಿ

ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಮತ್ತಷ್ಟು ಬಲಗೊಂಡಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments