Webdunia - Bharat's app for daily news and videos

Install App

ಶೃತಿ ಬೆಳ್ಳಕ್ಕಿಗೆ ಸಿಕ್ತು ಜಾಮೀನು

Webdunia
ಶುಕ್ರವಾರ, 26 ಏಪ್ರಿಲ್ 2019 (15:03 IST)
ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಶೃತಿ ಬೆಳ್ಳಕ್ಕಿಗೆ ಜಾಮೀನು ಮಂಜೂರು ಆಗಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ಧಾರವಾಡದ ಪ್ರಥಮ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಆಚಪ್ಪ ದೊಡ್ಡ ಬಸವರಾಜ ಅವರು, ಶೃತಿ ಬೆಳ್ಳಕ್ಕಿ ಅವರಿಗೆ  ಜಾಮೀನು  ಮಂಜೂರು ಮಾಡಿದರು.

ಹಿರಿಯ ವಕೀಲರಾದ ಆರ್. ಯು. ಬೆಳ್ಳಕ್ಕಿ ಅವರು ಶೃತಿ ಪರ ಸುದೀರ್ಘವಾದ ಮಂಡಿಸಿದರು. ಆಕೆಯೂ ಕಾನೂನು ವಿದ್ಯಾರ್ಥಿಯಾಗಿದ್ದು, ಅವಳು ಯಾವುದೇ ದುರುದ್ದೇಶದಿಂದ ಆ ಮಾತುಗಳನ್ನು ಹೇಳಿಲ್ಲ.

ಅಲ್ಲದೆ, ಅವಳು ಮಾಡಿರುವ ಆರೋಪಗಳು ಯಾವುದೇ ಗಂಭೀರವಾದ ಆರೋಪಗಳು ಅಲ್ಲ. ತನ್ನ ಧರ್ಮದ ರಕ್ಷಣೆಗಾಗಿ ಆಕೆ ಮಾತನಾಡಿದ್ದಾಳೆ. ಹೀಗಾಗಿ ಮಾನ್ಯ ನ್ಯಾಯಾಲಯವು ಆಕೆಗೆ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.
ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಾಧೀಶರು  ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದರು.

ಬಳಿಕ ಶೃತಿ ಬೆಳ್ಳಕ್ಕಿಯವರನ್ನು  ಧಾರವಾಡ ಕೇಂದ್ರ ಕಾರಾಗೃಹದ ಮಹಿಳಾ ವಿಭಾಗದಿಂದ ಬಿಡುಗಡೆಗೊಳಿಸಲಾಯಿತು. 
ಶೃತಿ ಜೈಲಿನಿಂದ ಬಿಡುಗಡೆಗೊಳ್ಳುತ್ತಿದ್ದಂತೆ ಬಿಜೆಪಿ ಶಾಸಕ ಅಮೃತ ದೇಸಾಯಿ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಸ್ವಾಗತಿಸಿ, ಸಿಹಿ ತಿನ್ನಿಸಿ ಬರ ಮಾಡಿಕೊಂಡರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments