ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

Krishnaveni K
ಶುಕ್ರವಾರ, 21 ನವೆಂಬರ್ 2025 (09:17 IST)
Photo Credit: X
ಬೆಂಗಳೂರು: ಬಾಹ್ಯಾಕಾಶದಿಂದ ಬೆಂಗಳೂರಿಗೆ ಬೇಕಾದರೂ ಸುಲಭವಾಗಿ ಬರಬಹುದು. ಆದರೆ ಮಾರತಹಳ್ಳಿಯಿಂದ ಮಾದಾವರ ತಲುಪುವುದು ಕಷ್ಟ ಎಂದು ಸಚಿವ ಪ್ರಿಯಾಂಕ್ ಖರ್ಗೆ ಎದುರೇ ಗಗನಯಾತ್ರಿ ಶುಭಾಂಶು ಶುಕ್ಲ ತಮಾಷೆ ಮಾಡಿದ್ದಾರೆ.

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಏನೂ ಹೊಸದಲ್ಲ. ಕೆಲವು ದಿನಗಳ ಮೊದಲು ಬೆಂಗಳೂರು ಟ್ರಾಫಿಕ್ ಬಗ್ಗೆ ಸ್ವತಃ ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿ ಮಾತನಾಡಿದ್ದರು. ಇದು ಬೆಂಗಳೂರು ಅಭಿವೃದ್ಧಿಯಾಗುತ್ತಿರುವುದರ ಸಂಕೇತ ಎಂದಿದ್ದರು. ಅವರ ಮಾತು ಟೀಕೆಗೆ ಗುರಿಯಾಗಿತ್ತು.

ಇದೀಗ ಸಚಿವರ ಎದುರೇ ಇತ್ತೀಚೆಗೆ ಗಗನಯಾನವನ್ನು ಯಶಸ್ವಿಯಾಗಿ ಮುಗಿಸಿ ಬಂದಿರುವ ಗಗನಯಾತ್ರಿ ಶುಭಾಂಶು ಶುಕ್ಲ ತಮಾಷೆ ಮಾಡಿದ್ದಾರೆ. ನೆಲಮಂಗಲ ಬಳಿ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದ ಶುಭಾಂಶು ಮಾರತ್ತಹಳ್ಳಿಯಿಂದ ಮಾದಾವರಕ್ಕೆ ತಲುಪುವ ಸಮಯಕ್ಕಿಂತ ಬೇಗ ಬಾಹ್ಯಾಕಾಶವನ್ನೇ ತಲುಪಬಹುದು ಎಂದಿದ್ದಾರೆ.

ಇದಕ್ಕೆ ಪ್ರಿಯಾಂಕ್ ಖರ್ಗೆ ಅಲ್ಲಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ. ಈ ವೇಳೆ ಶುಭಾಂಶು ಬಾಹ್ಯಾಕಾಶದಿಂದ ನೋಡುವಾಗ ನಮ್ಮ ಭಾರತ ಹೇಗೆ ಕಾಣಿಸುತ್ತದೆ ಎಂದು ವಿಡಿಯೋ ಸಮೇತ ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಡಿಕೆ ಶಿವಕುಮಾರ್ ಬೆಂಬಲಿಗರನ್ನು ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಮುಂದಿನ ಸುದ್ದಿ
Show comments