Select Your Language

Notifications

webdunia
webdunia
webdunia
webdunia

ಸಿದ್ಧಗಂಗಾ ಶ್ರೀ ಆರೋಗ್ಯ ಸುಧಾರಿಸುತ್ತಿದೆ ಎಂದ ಸಚಿವ!

ಸಿದ್ಧಗಂಗಾ ಶ್ರೀ ಆರೋಗ್ಯ ಸುಧಾರಿಸುತ್ತಿದೆ ಎಂದ ಸಚಿವ!
ವಿಜಯಪುರ , ಗುರುವಾರ, 3 ಜನವರಿ 2019 (19:03 IST)
ಸಿದ್ದಗಂಗಾ ಶ್ರೀಗಳ ಆರೋಗ್ಯ ದಿನೇ ದಿನೇ ಸುಧಾರಿಸುತ್ತಿದೆ. ಸಿದ್ದಗಂಗಾ ಶ್ರೀಗಳು ಆದಷ್ಟು ಬೇಗನೆ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಚಿವ ಹೇಳಿದ್ದಾರೆ.

ವಿಜಯಪುರದಲ್ಲಿ ಆರೋಗ್ಯ ಸಚಿವ ಶಿವಾನಂದ್ ಪಾಟೀಲ್ ಹೇಳಿಕೆ ನೀಡಿದ್ದು, ಶ್ರೀಗಳ ಆರೋಗ್ಯ ವೃದ್ಧಿಯಾಗುತ್ತಿದೆ ಎಂದಿದ್ದಾರೆ.
ಇನ್ನು ಸಿನಿಮಾ ನಟ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಆಯಾ ಇಲಾಖೆಗಳು ತಮ್ಮ ಕೆಲಸ ಮಾಡುತ್ತವೆ. ಈ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ವಿಜಯಪುರದಲ್ಲಿ ಎಐಎಂಎಸ್ ಸ್ಥಾಪನೆ ಕುರಿತು ವಿಜಯಪುರ ಸಂಸದರೂ ಪ್ರಯತ್ನ ಮಾಡಬೇಕು. ರಾಜ್ಯ ಸರ್ಕಾರವೂ ಪ್ರಯತ್ನ ಮಾಡಲಿದೆ ಎಂದು ಹೇಳಿದರು.

ಇನ್ನು ಶಬರಿಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶವನ್ನ ಭಾರತದ ಪ್ರಜೆಗಳು ಪಾಲಿಸಲೇಬೇಕು. ಧಾರ್ಮಿಕ ವಿಚಾರಗಳನ್ನು ಸಾಮರಸ್ಯದ ಮೂಲಕ ಬಗೆ ಹರಿಸಿಕೊಳ್ಳಬೇಕು ಎಂದರು.

ಶಾಸಕ ರಮೇಶ ಜಾರಕಿಹೊಳಿ ಪ್ರತಿನಿತ್ಯ ತಮ್ಮ ಸಂಪರ್ಕದಲ್ಲಿದ್ದಾರೆ. ಸರ್ಕಾರ ಪತನದ ಪ್ರಶ್ನೆಯೇ ಇಲ್ಲ. ಸಮ್ಮಿಶ್ರ ಸರಕಾರ ಇರುವ ಹಿನ್ನೆಲೆ ಅಧಿಕಾರವನ್ನು ಹಂಚಿಕೆ ಮಾಡುವುದು ಅನಿವಾರ್ಯ ಎಂದು ಹೇಳಿದರು.  




Share this Story:

Follow Webdunia kannada

ಮುಂದಿನ ಸುದ್ದಿ

ಆದಿ ಜಾಂಬವ ಅಭಿವೃದ್ಧಿ ನಿಗಮ ಬೇಡ ಎಂದವರಾರು ಗೊತ್ತಾ?