Select Your Language

Notifications

webdunia
webdunia
webdunia
webdunia

ಸಿದ್ದಗಂಗಾ ಶ್ರೀಗಳು ಚೆನ್ನೈಗೆ ತೆರಳುತ್ತಿರುವ ಹಿನ್ನಲೆ; ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್ ವೈ

ಸಿದ್ದಗಂಗಾ ಶ್ರೀಗಳು ಚೆನ್ನೈಗೆ ತೆರಳುತ್ತಿರುವ ಹಿನ್ನಲೆ; ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್ ವೈ
ತುಮಕೂರು , ಶುಕ್ರವಾರ, 7 ಡಿಸೆಂಬರ್ 2018 (11:10 IST)
ತುಮಕೂರು : ಹೆಚ್ಚಿನ ಚಿಕಿತ್ಸೆಗಾಗಿ ಸಿದ್ದಗಂಗಾ ಶ್ರೀಗಳನ್ನು ಚೆನ್ನೈ ಗೆ ಕರೆದೊಯ್ಯುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ, ಬಿ.ಎಸ್. ಯಡಿಯೂರಪ್ಪ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.


ಇಂದು ಬೆಳಗ್ಗೆ ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ‘ಶ್ರೀಗಳು ಬೆಳಗಿನ ಉಪಹಾರ ಸೇವಿಸಿದ್ದು, ಲವಲವಿಕೆಯಿಂದ ಇದ್ದಾರೆ, ಚೆನ್ನೈನಲ್ಲಿ ಅವರು ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮುಗಿಸಿಕೊಂಡು ವಾಪಸ್ಸಾಗುತ್ತಾರೆ’ ಎಂದು ಹೇಳಿದ್ದಾರೆ.


‘ಈ ವಯಸ್ಸಿನಲ್ಲೂ ಶ್ರೀಗಳು ಬಸವಣ್ಣನವರ ವಚನಗಳನ್ನು ಹೇಳುತ್ತಿದ್ದಾರೆ. ಅವರಿಗೆ ಹೆಚ್ಚಿನ ಆಯಸ್ಸು ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಹೆಚ್ಚಿನ ಚಿಕಿತ್ಸೆಗಾಗಿ ಸಿದ್ದಗಂಗಾ ಶ್ರೀಗಳನ್ನು ಚೆನ್ನೈಗೆ ಶಿಫ್ಟ್ ಮಾಡಲು ನಿರ್ಧಾರ