Webdunia - Bharat's app for daily news and videos

Install App

ಸಿದ್ದಗಂಗಾ ಶ್ರೀ ಹೆಸರಲ್ಲಿ ಯೋಜನೆ ಶೀಘ್ರ ಜಾರಿ!

Webdunia
ಶನಿವಾರ, 26 ಜನವರಿ 2019 (17:11 IST)
ಅಗಲಿದ ಹಿರಿಯ ಚೇತನ, ನಡೆದಾಡುವ ದೇವರು ಡಾ. ಶಿವಕುಮಾರ ಸ್ವಾಮೀಜಿ ಅವರ ನೆನಪು ಜನಮಾನಸದಲ್ಲಿ ಉಳಿಯುವ ಯೋಜನೆಯೊಂದನ್ನು ಮುಂದಿನ ಬಜೆಟ್ನಲ್ಲಿ ಘೋಷಿಸಲು ಮುಖ್ಯಮಂತ್ರಿ ಸಮ್ಮತಿ ನೀಡಿದ್ದಾರೆ.

ಸಿದ್ದಗಂಗಾ ಶ್ರೀಗಳ ಹೆಸರಿನಲ್ಲಿ ಯೋಜನೆ ಶೀಘ್ರ ಜಾರಿಗೊಳಿಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್  ಹೇಳಿದ್ದಾರೆ.

ತುಮಕೂರು ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಹಿರಿಯ ಶ್ರೀಗಳಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದುಶ್ರೀಗಳ ಕುರಿತು ವಿಶೇಷ ಯೋಜನೆಯನ್ನು ಘೋಷಣೆ ಮಾಡುವ ಭರವಸೆ ತಮಗಿದೆ ಎಂದರು.

ನಡೆದಾಡುವ ದೇವರ ಪ್ರತಿಮೆ ನಿರ್ಮಾಣ ಮಾಡುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸುವುದಾಗಿ ಅವರು ಹೇಳಿದರು. ನಾಡಿನ ಇತಿಹಾಸದಲ್ಲಿ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ಇಂತಹ ಮತ್ತೊಬ್ಬ ಶ್ರೀಗಳನ್ನು ನೋಡಲು ಸಾಧ್ಯವಿಲ್ಲ. ಅವರ ಕಾಲಘಟ್ಟದಲ್ಲಿ ನಾವೆಲ್ಲಾ ಬದುಕಿರೋದೇ ನಮ್ಮೆಲ್ಲರ ಅದೃಷ್ಟ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments